Andolana originals

ರೇವಣ್ಣಗೆ ದೇಗುಲ ಪ್ರವೇಶಕ್ಕೆ ಅವಕಾಶ ಸರಿಯೇ?

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್‌ಬಿ ಕಾಲೋನಿ, ನಂಜನಗೂಡು

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

7 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

9 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

9 hours ago