Andolana originals

ರೇವಣ್ಣಗೆ ದೇಗುಲ ಪ್ರವೇಶಕ್ಕೆ ಅವಕಾಶ ಸರಿಯೇ?

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್‌ಬಿ ಕಾಲೋನಿ, ನಂಜನಗೂಡು

andolana

Recent Posts

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

5 mins ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

20 mins ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

1 hour ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

4 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

4 hours ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

5 hours ago