Andolana originals

ರೇವಣ್ಣಗೆ ದೇಗುಲ ಪ್ರವೇಶಕ್ಕೆ ಅವಕಾಶ ಸರಿಯೇ?

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್‌ಬಿ ಕಾಲೋನಿ, ನಂಜನಗೂಡು

andolana

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

6 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

11 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

11 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

11 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

16 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

16 hours ago