Andolana originals

ರೇವಣ್ಣಗೆ ದೇಗುಲ ಪ್ರವೇಶಕ್ಕೆ ಅವಕಾಶ ಸರಿಯೇ?

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್‌ಬಿ ಕಾಲೋನಿ, ನಂಜನಗೂಡು

andolana

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

17 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

1 hour ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

2 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

3 hours ago