Andolana originals

ರೇವಣ್ಣಗೆ ದೇಗುಲ ಪ್ರವೇಶಕ್ಕೆ ಅವಕಾಶ ಸರಿಯೇ?

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್‌ಬಿ ಕಾಲೋನಿ, ನಂಜನಗೂಡು

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

4 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

5 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

11 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

11 hours ago