Andolana originals

ರೇವಣ್ಣಗೆ ದೇಗುಲ ಪ್ರವೇಶಕ್ಕೆ ಅವಕಾಶ ಸರಿಯೇ?

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್‌ಬಿ ಕಾಲೋನಿ, ನಂಜನಗೂಡು

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago