ಓದುಗರ ಪತ್ರ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ರಾಜ್ಯ ಸರ್ಕಾರ ತಾತ್ಸಾರ ಮನೋಭಾವನೆಯನ್ನು ಅನುಸರಿಸುತ್ತಿರುವುದು ವಿಷಾದನೀಯ. ೨-೩ ವರ್ಷಗಳಿಂದ ಯಾವುದೇ ನೇಮಕಾತಿ ಪ್ರಕ್ರಿಯೆಯನ್ನೂ ನಡೆಸದೆ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಲ್ಲಿ ಭವಿಷ್ಯದ ಬಗ್ಗೆ ಆತಂಕವನ್ನು ಸೃಷ್ಟಿಸಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಮಾಧ್ಯಮಗಳ ಮುಂದೆ ಸರ್ಕಾರವನ್ನು ಪ್ರತಿನಿಧಿಸುವ ಸಚಿವರುಗಳು ವಿವಿಧ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ, ಅವುಗಳನ್ನು ಭರ್ತಿ ಮಾಡಲು ಆದೇಶ ಮಾಡಲಿದ್ದೇವೆ ಎಂಬ ಭರವಸೆಗಳನ್ನು ನೀಡುವುದರಲ್ಲೇ ಸಮಯ ಕಳೆದು ಹುದ್ದೆಗಳನ್ನು ಭರ್ತಿ ಮಾಡುವುದನ್ನೇ ಮರೆತಿದ್ದಾರೆ.
ನೇಮಕಾತಿಗಳು ನಿಧಾನವಾದಷ್ಟು ರಾಜ್ಯದ ಲಕ್ಷಾಂತರ ಅಭ್ಯರ್ಥಿಗಳ ಬದುಕಿನಲ್ಲಿ ಕತ್ತಲು ಕವಿಯಲು ಪ್ರಾರಂಭವಾಗುತ್ತದೆ. ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ರಾಜ್ಯ ಸರ್ಕಾರ ತಕ್ಷಣ ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕಿದೆ. ಹಲವು ವರ್ಷಗಳಿಂದ ಪ್ರಾಮಾಣಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಧ್ಯಯನದಲ್ಲಿ ತೊಡಗಿರುವ ಅಭ್ಯರ್ಥಿಗಳಿಗೆ ಮೋಸವಾಗದ ರೀತಿಯಲ್ಲಿ ಸರ್ಕಾರ ಪಾರದರ್ಶಕವಾಗಿ ನೇಮಕಾತಿಯನ್ನು ನಡೆಸಬೇಕಾಗಿದೆ.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…