Andolana originals

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಪ್ಪಣೆ ಕೊಡಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿಲ್ಲದ ವಿಚಾರವೇನಲ್ಲ. ಲಂಚ ಎಂಬ ಹಗಲು ದರೋಡೆಯಿಂದ ಜನಸಾಮಾನ್ಯರು ಹೈರಾಣರಾಗುತ್ತಿದ್ದಾರೆ. ಒಂದೆರಡು ವರ್ಷಗಳ ಹಿಂದೆ ಜರಿಗೆ ತಂದ ಇ- ಖಾತೆ ಅಥವಾ ಇ-ಸ್ವತ್ತು ಮಾಡಿಸಿಕೊಳ್ಳಲು ಅಥವಾ ಎ ಖಾತಾ/ ಬಿ ಖಾತಾ ಪಡೆದುಕೊಳ್ಳಲು ಸಾರ್ವಜನಿಕರು ಹತ್ತಾರು ಸಾವಿರ ರೂಪಾಯಿಗಳನ್ನು ಲಂಚದ ರೂಪದಲ್ಲಿ ಸಂಬಂಧಪಟ್ಟ ನೌಕರನಿಗೆ ಅಥವಾ  ಅಧಿಕಾರಿಗೆ ನೀಡಲೇ ಬೇಕು. ಲಂಚ ನೀಡದ ವ್ಯಕ್ತಿಗಳ ಅರ್ಜಿಗಳು ಎ ಒಂದು ಕಡೆ ಬಿಸಾಡಿಲ್ಪಟ್ಟಿರುತ್ತವೆ. ಲಂಚ ಕೊಟ್ಟಾಗ ಮಾತ್ರ ಅಂತಹ ಅರ್ಜಿಗಳಿಗೆ ಮರುಜೀವ ಬರುತ್ತದೆ. ಈ ರೀತಿ ಲಂಚ ಎಂಬುದು ಸಾರ್ವಜನಿಕ ರಂಗದಲ್ಲಿ ಬೃಹದಾಕಾರವಾಗಿ ಬೆಳೆದು ಬಂದಿದೆ. ಎಷ್ಟೇ ಪ್ರಯತ್ನ ಪಟ್ಟರೂ ಲಂಚಾಸುರನ ಸಂಹಾರವಾಗದೇ ದಿನೇ ದಿನೇ ತನ್ನ ಆಕಾರ ಮತ್ತು ಸ್ವರೂಪವನ್ನು ವೃದ್ಧಿಸಿಕೊಳ್ಳುತ್ತಲೇ ಇದ್ದಾನೆ.

‘ಅವನಿಗೆ’ ರಾಜಕಾರಣಿಗಳ ಪರೋಕ್ಷ ಬೆಂಬಲ ಅಥವಾ ಕುಮ್ಮಕ್ಕು ಇರುತ್ತದೆ ಎಂಬುದು ಜನಸಾಮಾನ್ಯರಿಗೆ ತಿಳಿದೇ ಇದೆ. ಇಂತಹ ಸಂದರ್ಭದಲ್ಲಿ ಲಂಚ ನಿರ್ಮೂಲನೆಗೆ ಹೊರಟಿರುವ ಡಿ.ಕೆ.ಶಿವಕುಮಾರ್‌ರವರ ಪ್ರಯತ್ನ ವ್ಯರ್ಥ ಕಸರತ್ತಲ್ಲದೇ ಬೇರೇನೂ ಅಲ್ಲ.

 -ಕೆ.ವಿ.ವಾಸು,

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

1 min ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

6 mins ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

14 mins ago

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

12 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

13 hours ago