ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ ಹಲವಾರು ಹಿರಿಯ ರಾಜಕಾರಣಿಗಳು ಕಂಬಳ ಬೇಡ ಎಂದರೂ ಸರ್ಕಾರ ಕಂಬಳಕ್ಕೆ ಸಿದ್ಧತೆ ನಡೆಸುತ್ತಿರುವುದು ಹಠಮಾರಿತನದ ಧೋರಣೆಯಾಗಿದೆ. ದಸರಾ ಹಬ್ಬ ಮೈಸೂರಿನ ಅಸ್ಮಿತೆ. ಪ್ರತಿ ವರ್ಷವೂ ಒಂದೊಂದು ಹೊಸ ಹೊಸ ಕಾರ್ಯಕ್ರಮಗಳನ್ನು ಸೇರಿಸುತ್ತಾ ಹೋದರೆ ಮೂಲ ದಸರಾ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯವೂ ಇದೆ. ಮುಂದಿನ ದಿನಗಳಲ್ಲಿ, ತಮಿಳುನಾಡಿನ ಪ್ರಸಿದ್ಧ ಕ್ರೀಡೆ ಜಲ್ಲಿ ಕಟ್ಟು, ಬಿಹಾರದ ನೃತ್ಯ, ಬೆಂಗಾಲಿ ಡ್ಯಾನ್ಸ್ ಹೀಗೆ ಸೇರಿಸುತ್ತಾ ಹೋದರೇ ನಾಡ ಹಬ್ಬ ದಸರಾದ ಮೆರುಗು ಮರೆಯಾಗುತ್ತಾ ಹೋಗುತ್ತದೆ. ಈ ವರ್ಷ ‘ಕೆಲವರು’ ಹಣ ಮಾಡಲು ಕಂಬಳವನ್ನು ಆಯೋಜಿಸಲು ಮುಂದಾದಂತೆ ಕಾಣುತ್ತಿದೆ.
ಇದಕ್ಕೆ ಸರ್ಕಾರ ಅವಕಾಶ ನೀಡಬಾರದು. ಇನ್ನೊಂದು ವಿಷಯ ಇಲ್ಲಿ ಪ್ರಸ್ತಾಪಿಸಬೇಕಾಗುತ್ತದೆ. ದಸರಾ ಮುಗಿದು ನಾಲ್ಕೈದು ತಿಂಗಳಾದರೂ ಲೆಕ್ಕ ಪತ್ರವನ್ನೇ ಕೊಡುವುದಿಲ್ಲ. ನಂತರ ಸಾರ್ವಜನಿಕರನ್ನು ತೃಪ್ತಿಪಡಿಸಲೆಂದೋ ಲೆಕ್ಕಪತ್ರ ನೀಡುವ ಸಂಪ್ರದಾಯವನ್ನು ಕಾಣಬಹುದು. ಈ ವರ್ಷದಿಂದಾದರೂ ದಸರಾ ಮುಗಿದ ಕೆಲವು ದಿನಗಳಲ್ಲೇ ಜನರಿಗೆ ‘ಒಪ್ಪಿಗೆ’ಯಾಗುವಂತಹ ಲೆಕ್ಕಪತ್ರ ನೀಡುವ ಅಭ್ಯಾಸ ರೂಢಿಸಿಕೊಳ್ಳಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಮೈಸೂರು
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…