ಓದುಗರ ಪತ್ರ
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ.
ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್ ಕ್ರೀಡಾಂಗಣಗಳು ಸರಿಯಾದ ಹುಲ್ಲುಹಾಸು ಇಲ್ಲದೆ ಕೇವಲ ಮಣ್ಣಿನ ದಿಬ್ಬಗಳಾಗಿವೆ. ಕೇವಲ ಬೆರಳೆಣಿಕೆಯಷ್ಟು ಅಂತರರಾಷ್ಟ್ರೀಯ ಗುಣಮಟ್ಟದ ಮೈದಾನಗಳಿದ್ದು, ಅವುಗಳ ನಿರ್ವಹಣೆಗೆಸರ್ಕಾರ ಬಿಡುಗಡೆ ಮಾಡುವ ಅನುದಾನ ಯಾವುದಕ್ಕೂ ಸಾಲುವುದಿಲ್ಲ. ಸರ್ಕಾರ ಮತ್ತು ಕ್ರೀಡಾ ಇಲಾಖೆಯ ಅಸಡ್ಡೆ ಹಾಗೂ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸ್ಥಳೀಯ ಪ್ರತಿಭೆಗಳು ಕಮರಿ ಹೋಗುತ್ತಿವೆ. ಯುವ ಆಟಗಾರರಿಗೆ ಪ್ರೋತ್ಸಾಹ ಧನವಿಲ್ಲ, ಸರಿಯಾದ ತರಬೇತುದಾರರಿಲ್ಲ. ಬಜೆಟ್ನಲ್ಲಿ ಸಿಗುವ ಅಲ್ಪಸ್ವಲ್ಪ ಅನುದಾನವೂ ಇತರೆಡೆಗೆ ವರ್ಗಾವಣೆಯಾಗುತ್ತಿರುವುದು ಕ್ರೀಡಾ ವ್ಯವಸ್ಥೆಯ ಸ್ಥಿತಿಯನ್ನು ತೋರಿಸುತ್ತದೆ.
ಪ್ರತಿ ಜಿಲ್ಲೆಯಲ್ಲೂ ಕನಿಷ್ಠ ಒಂದು ಸುಸಜ್ಜಿತ ಸಿಂಥೆಟಿಕ್ ಟರ್ಫ್ ಮೈದಾನ ನಿರ್ಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಶಾಲೆ-ಕಾಲೇಜು ಹಂತದ ಕಡ್ಡಾಯವಾಗಿ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಿ, ಕ್ರೀಡಾ ನಿಧಿಯನ್ನು ಮೀಸಲಿಡಬೇಕು. ಇಲ್ಲದಿದ್ದರೆ ಕರ್ನಾಟಕದ ಫುಟ್ಬಾಲ್ ಭವಿಷ್ಯ ಮಂಕಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
-ಡಾ.ಎಚ್. ಕೆ.ವಿಜಯಕುಮಾರ್, ಬೆಂಗಳೂರು
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…