Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಓದುಗರ ಪತ್ರ: ವಿನಾಕಾರಣ ರಸ್ತೆ ಬಂದ್ ಏಕೆ?‌

ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಮಸೀದಿಯ ಸಮೀಪದ ರಸ್ತೆಗೆ ವಿನಾಕಾರಣ ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಹುಣಸೂರು ರಸ್ತೆಯಿಂದ ಎಡಕ್ಕೆ ಮುಕ್ತವಾಗಿ ಸಂಚರಿಸಲು ಅವಕಾಶವಿರುವ ಈ ರಸ್ತೆಯಲ್ಲಿ ಯಾವುದೇ ಕಾಮಗಾರಿಗಳು ನಡೆಯದೇ ಇದ್ದರೂ ಸುಖಾಸುಮ್ಮನೆ ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಫಲಕವನ್ನು ಹಾಕಿಕೊಂಡು ರಸ್ತೆಯನ್ನು ಬಂದ್ ಮಾಡಲಾಗಿದೆ. ಹೀಗೆ ವಿನಾಕಾರಣ ರಸ್ತೆಯನ್ನು ಮುಚ್ಚಿರುವುದರಿಂದ ಸಾರ್ವಜನಿಕರು ದಸರಾ ಟ್ರಾಫಿಕ್‌ನ ನಡುವೆಯೂ ಈ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇಲ್ಲಿ ಹಾಕಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕಿದೆ.
-ಎಂ. ರಾಮಕೃಷ್ಣ, ಪಡುವಾರಹಳ್ಳಿ, ಮೈಸೂರು

 

 

Tags: