ಓದುಗರ ಪತ್ರ
ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆನೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಸುಮಾರು ೮ ವರ್ಷಗಳೇ ಕಳೆದಿದ್ದು, ಗುಣಮುಖವಾಗಿರುವ ಆನೆಯನ್ನು ಇನ್ನೂ ಕರೆತಂದಿಲ್ಲ.
ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ನಿರಂತರವಾಗಿ ನಡೆಯುತ್ತಿದ್ದ ಸಾಂಪ್ರದಾಯಿಕ ಕೈಂಕರ್ಯಗಳು, ಉತ್ಸವ, ಮೆರವಣಿಗೆಗಳಲ್ಲಿ ಸದಾ ಮುಂಚೂಣಿಯಲ್ಲಿ ಕಾಣುತ್ತಿದ್ದ ಗೌರಿ ಆನೆ ಇಲ್ಲದೆ ತೊಂದರೆಯಾಗುತ್ತಿದೆ.
ಆನೆ ತಂಗಲು ನಿರ್ಮಿಸಿದ್ದ ದೇವಸ್ಥಾನದ ಮುಂಭಾಗದ ಶೆಡ್ ಕೂಡ ಖಾಲಿಯಾಗಿ ಬಿಕೋ ಎನ್ನುತ್ತಿದ್ದು, ಗೌರಿಯ ದರ್ಶನಕ್ಕೆ ಆಗಾಗ್ಗೆ ಬರುತ್ತಿದ್ದ ಶಾಲಾ ಮಕ್ಕಳು, ಭಕ್ತ ಸಮೂಹ ನಿರಾಸೆಯಿಂದ ತೆರಳುತ್ತಿದ್ದಾರೆ. ಧಾರ್ಮಿಕ ಹಾಗೂ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಈ ದೇಗುಲ ಅತಿ ಹೆಚ್ಚು ಆದಾಯ ಬರುವ ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾಗಿದ್ದು, ಹುಂಡಿಯ ಹಣ, ಧಾರ್ಮಿಕ ಸೇವಾ ಕಾರ್ಯಗಳ ಶುಲ್ಕಗಳಿಂದಾಗಿ ವಾರ್ಷಿಕ ಸುಮಾರು ೧೦-೧೫ ಕೋಟಿ ರೂ. ಆದಾಯ ಬರುತ್ತಿದೆ.
ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಆನೆ ಕರೆ ತರಲು ಹಿಂದೇಟು ಹಾಕುತ್ತಿರುವುದಾದರೂ ಯಾವ ಕಾರಣಕ್ಕೆ? ಇನ್ನಾದರೂ ಶ್ರೀಕಂಠೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಶಾಸಕರಾದ ದರ್ಶನ್ ಧ್ರುವ ನಾರಾಯಣ ಅವರು ದೇವಾಲಯದ ಪಟ್ಟದ ಆನೆ ಗೌರಿಯನ್ನು ವಾಪಸ್ ಕರೆ ತರಲು ಕ್ರಮ ಕೈಗೊಳ್ಳಬೇಕಾಗಿದೆ.
– ಅನಿಲ್ ಕುಮಾರ್, ನಂಜನಗೂಡು
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…