ಓದುಗರ ಪತ್ರ
ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆನೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಸುಮಾರು ೮ ವರ್ಷಗಳೇ ಕಳೆದಿದ್ದು, ಗುಣಮುಖವಾಗಿರುವ ಆನೆಯನ್ನು ಇನ್ನೂ ಕರೆತಂದಿಲ್ಲ.
ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ನಿರಂತರವಾಗಿ ನಡೆಯುತ್ತಿದ್ದ ಸಾಂಪ್ರದಾಯಿಕ ಕೈಂಕರ್ಯಗಳು, ಉತ್ಸವ, ಮೆರವಣಿಗೆಗಳಲ್ಲಿ ಸದಾ ಮುಂಚೂಣಿಯಲ್ಲಿ ಕಾಣುತ್ತಿದ್ದ ಗೌರಿ ಆನೆ ಇಲ್ಲದೆ ತೊಂದರೆಯಾಗುತ್ತಿದೆ.
ಆನೆ ತಂಗಲು ನಿರ್ಮಿಸಿದ್ದ ದೇವಸ್ಥಾನದ ಮುಂಭಾಗದ ಶೆಡ್ ಕೂಡ ಖಾಲಿಯಾಗಿ ಬಿಕೋ ಎನ್ನುತ್ತಿದ್ದು, ಗೌರಿಯ ದರ್ಶನಕ್ಕೆ ಆಗಾಗ್ಗೆ ಬರುತ್ತಿದ್ದ ಶಾಲಾ ಮಕ್ಕಳು, ಭಕ್ತ ಸಮೂಹ ನಿರಾಸೆಯಿಂದ ತೆರಳುತ್ತಿದ್ದಾರೆ. ಧಾರ್ಮಿಕ ಹಾಗೂ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಈ ದೇಗುಲ ಅತಿ ಹೆಚ್ಚು ಆದಾಯ ಬರುವ ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾಗಿದ್ದು, ಹುಂಡಿಯ ಹಣ, ಧಾರ್ಮಿಕ ಸೇವಾ ಕಾರ್ಯಗಳ ಶುಲ್ಕಗಳಿಂದಾಗಿ ವಾರ್ಷಿಕ ಸುಮಾರು ೧೦-೧೫ ಕೋಟಿ ರೂ. ಆದಾಯ ಬರುತ್ತಿದೆ.
ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಆನೆ ಕರೆ ತರಲು ಹಿಂದೇಟು ಹಾಕುತ್ತಿರುವುದಾದರೂ ಯಾವ ಕಾರಣಕ್ಕೆ? ಇನ್ನಾದರೂ ಶ್ರೀಕಂಠೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಶಾಸಕರಾದ ದರ್ಶನ್ ಧ್ರುವ ನಾರಾಯಣ ಅವರು ದೇವಾಲಯದ ಪಟ್ಟದ ಆನೆ ಗೌರಿಯನ್ನು ವಾಪಸ್ ಕರೆ ತರಲು ಕ್ರಮ ಕೈಗೊಳ್ಳಬೇಕಾಗಿದೆ.
– ಅನಿಲ್ ಕುಮಾರ್, ನಂಜನಗೂಡು
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…