ಓದುಗರ ಪತ್ರ
ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆನೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಸುಮಾರು ೮ ವರ್ಷಗಳೇ ಕಳೆದಿದ್ದು, ಗುಣಮುಖವಾಗಿರುವ ಆನೆಯನ್ನು ಇನ್ನೂ ಕರೆತಂದಿಲ್ಲ.
ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ನಿರಂತರವಾಗಿ ನಡೆಯುತ್ತಿದ್ದ ಸಾಂಪ್ರದಾಯಿಕ ಕೈಂಕರ್ಯಗಳು, ಉತ್ಸವ, ಮೆರವಣಿಗೆಗಳಲ್ಲಿ ಸದಾ ಮುಂಚೂಣಿಯಲ್ಲಿ ಕಾಣುತ್ತಿದ್ದ ಗೌರಿ ಆನೆ ಇಲ್ಲದೆ ತೊಂದರೆಯಾಗುತ್ತಿದೆ.
ಆನೆ ತಂಗಲು ನಿರ್ಮಿಸಿದ್ದ ದೇವಸ್ಥಾನದ ಮುಂಭಾಗದ ಶೆಡ್ ಕೂಡ ಖಾಲಿಯಾಗಿ ಬಿಕೋ ಎನ್ನುತ್ತಿದ್ದು, ಗೌರಿಯ ದರ್ಶನಕ್ಕೆ ಆಗಾಗ್ಗೆ ಬರುತ್ತಿದ್ದ ಶಾಲಾ ಮಕ್ಕಳು, ಭಕ್ತ ಸಮೂಹ ನಿರಾಸೆಯಿಂದ ತೆರಳುತ್ತಿದ್ದಾರೆ. ಧಾರ್ಮಿಕ ಹಾಗೂ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಈ ದೇಗುಲ ಅತಿ ಹೆಚ್ಚು ಆದಾಯ ಬರುವ ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾಗಿದ್ದು, ಹುಂಡಿಯ ಹಣ, ಧಾರ್ಮಿಕ ಸೇವಾ ಕಾರ್ಯಗಳ ಶುಲ್ಕಗಳಿಂದಾಗಿ ವಾರ್ಷಿಕ ಸುಮಾರು ೧೦-೧೫ ಕೋಟಿ ರೂ. ಆದಾಯ ಬರುತ್ತಿದೆ.
ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಆನೆ ಕರೆ ತರಲು ಹಿಂದೇಟು ಹಾಕುತ್ತಿರುವುದಾದರೂ ಯಾವ ಕಾರಣಕ್ಕೆ? ಇನ್ನಾದರೂ ಶ್ರೀಕಂಠೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಶಾಸಕರಾದ ದರ್ಶನ್ ಧ್ರುವ ನಾರಾಯಣ ಅವರು ದೇವಾಲಯದ ಪಟ್ಟದ ಆನೆ ಗೌರಿಯನ್ನು ವಾಪಸ್ ಕರೆ ತರಲು ಕ್ರಮ ಕೈಗೊಳ್ಳಬೇಕಾಗಿದೆ.
– ಅನಿಲ್ ಕುಮಾರ್, ನಂಜನಗೂಡು
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…