ಓದುಗರ ಪತ್ರ
ಮೈಸೂರಿನ ನ್ಯೂ ಕಾಂತರಾಜ್ ಅರಸ್ ರಸ್ತೆಯ ಕನ್ನೇಗೌಡನ ಕೊಪ್ಪಲಿನ ಪ್ರವೇಶ ದ್ವಾರದಲ್ಲಿರುವ ರೈಲ್ವೆ ಕೆಳಸೇತುವೆ ಅತ್ಯಂತ ಚಿಕ್ಕದಾಗಿದ್ದು, ಈ ಕೆಳಸೇತುವೆಯ ಮೂಲಕವೇ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ರೈಲ್ವೇ ಸ್ಟೇಷನ್, ಗ್ರಾಮಾಂತರ ಬಸ್ ನಿಲ್ದಾಣ, ಬೆಂಗಳೂರಿಗೆ ಪ್ರಯಾಣ ಮಾಡುವವರು, ಕೋರ್ಟ್ -ಕಚೇರಿಗಳಿಗೆ ಹೋಗುವವರು, ಸಿಟಿ ಮಾರ್ಕೆಟ್ಗೆ ಹೋಗುವವರು ಹಾಗೂ ವ್ಯಾಪಾರ ವಹಿವಾಟಿಗೆ ಹೋಗುವವರು ಈ ಕೆಳಸೇತುವೆಯನ್ನು ಹಾದುಹೋಗಬೇಕಾಗಿದೆ.
ಈ ಕೆಳಸೇತುವೆ ಚಿಕ್ಕದಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಮ್ಮೊಮ್ಮೆ ಕನ್ನೇಗೌಡನಕೊಪ್ಪಲಿನ ರಸ್ತೆ ಉದ್ದಕ್ಕೂ ವಾಹನ ದಟ್ಟಣೆಯಾಗುತ್ತದೆ. ಇದರಿಂದಾಗಿ ಇಲ್ಲಿ ಸಣ್ಣಪುಟ್ಟ ಅಪಘಾತಗಳೂ ಸಂಭವಿಸುತ್ತಲೇ ಇವೆ. ಈ ಕೆಳ ಸೇತುವೆ ಎಡಭಾಗಕ್ಕೆ ಸಾಕಷ್ಟು ಜಾಗ ಇರುವುದರಿಂದ, ಈ ಕೆಳ ಸೇತುವೆಯನ್ನು ಅಗಲೀಕರಣ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…