ಓದುಗರ ಪತ್ರ
ಮೈಸೂರಿನ ನ್ಯೂ ಕಾಂತರಾಜ್ ಅರಸ್ ರಸ್ತೆಯ ಕನ್ನೇಗೌಡನ ಕೊಪ್ಪಲಿನ ಪ್ರವೇಶ ದ್ವಾರದಲ್ಲಿರುವ ರೈಲ್ವೆ ಕೆಳಸೇತುವೆ ಅತ್ಯಂತ ಚಿಕ್ಕದಾಗಿದ್ದು, ಈ ಕೆಳಸೇತುವೆಯ ಮೂಲಕವೇ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ರೈಲ್ವೇ ಸ್ಟೇಷನ್, ಗ್ರಾಮಾಂತರ ಬಸ್ ನಿಲ್ದಾಣ, ಬೆಂಗಳೂರಿಗೆ ಪ್ರಯಾಣ ಮಾಡುವವರು, ಕೋರ್ಟ್ -ಕಚೇರಿಗಳಿಗೆ ಹೋಗುವವರು, ಸಿಟಿ ಮಾರ್ಕೆಟ್ಗೆ ಹೋಗುವವರು ಹಾಗೂ ವ್ಯಾಪಾರ ವಹಿವಾಟಿಗೆ ಹೋಗುವವರು ಈ ಕೆಳಸೇತುವೆಯನ್ನು ಹಾದುಹೋಗಬೇಕಾಗಿದೆ.
ಈ ಕೆಳಸೇತುವೆ ಚಿಕ್ಕದಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಮ್ಮೊಮ್ಮೆ ಕನ್ನೇಗೌಡನಕೊಪ್ಪಲಿನ ರಸ್ತೆ ಉದ್ದಕ್ಕೂ ವಾಹನ ದಟ್ಟಣೆಯಾಗುತ್ತದೆ. ಇದರಿಂದಾಗಿ ಇಲ್ಲಿ ಸಣ್ಣಪುಟ್ಟ ಅಪಘಾತಗಳೂ ಸಂಭವಿಸುತ್ತಲೇ ಇವೆ. ಈ ಕೆಳ ಸೇತುವೆ ಎಡಭಾಗಕ್ಕೆ ಸಾಕಷ್ಟು ಜಾಗ ಇರುವುದರಿಂದ, ಈ ಕೆಳ ಸೇತುವೆಯನ್ನು ಅಗಲೀಕರಣ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…