ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ. ಕೆಲವರು ಹೇಳುವಂತೆ, ಇದಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿ ಕೊರತೆ. ಮತ್ತೆ ಕೆಲವರು ಈ ಕಟ್ಟಡವು ಮೈಸೂರು ನಗರ ಪಾಲಿಕೆಯ ಕಟ್ಟಡವಾಗಿದ್ದು, ಇದನ್ನು ಮೈಸೂರು ನಗರ ಪಾಲಿಕೆಯು ಇದುವರೆಗೂ ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡದ ಕಾರಣ, ಸದ್ಯಕ್ಕೆ ಬೀಗ ಹಾಕಲಾಗಿದೆ ಎನ್ನುತ್ತಿದ್ದಾರೆ.
ಕಾರಣ ಏನೇ ಇರಲಿ, ಇದರಿಂದ ಈ ಭಾಗದ ಸಾರ್ವಜನಿಕರಿಗೆ ಅದರಲ್ಲೂ ಅನಾರೋಗ್ಯಕ್ಕೆ ತುತ್ತಾದ ಹಿರಿಯ ನಾಗರಿಕರು, ಮತ್ತು ಮಹಿಳೆಯರಿಗೆ ತೀವ್ರ ಅನನುಕೂಲವಾಗಿದೆ. ಅನಾರೋಗ್ಯಕ್ಕೆ ತುತ್ತಾದವರು ಪಕ್ಕದ, ಜಯನಗರದ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಆಸ್ಪತ್ರೆಯ ಆವರಣ ಈಗ ದನ – ಕರುಗಳು, ನಾಯಿಗಳ ತಂಗುದಾಣವಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಗಮನ ಹರಿಸಿ, ಕೂಡಲೇ ಈ ಆರೋಗ್ಯ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು.
-ಬೂಕನಕೆರೆ ವಿಜೇಂದ್ರ, ಮೈಸೂರು
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…
ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ…
ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ೩.೫…
ಮೈಸೂರಿನ ದಸರಾ ಚಲನಚಿತ್ರೋತ್ಸವವನ್ನು ಕಳೆದ ಸುಮಾರು ೫೦ ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಪ್ರೇಕ್ಷಕರ ಭಾಗವಹಿಸುವಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ…
ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ…