Andolana originals

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ. ಕೆಲವರು ಹೇಳುವಂತೆ, ಇದಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿ ಕೊರತೆ. ಮತ್ತೆ ಕೆಲವರು ಈ ಕಟ್ಟಡವು ಮೈಸೂರು ನಗರ ಪಾಲಿಕೆಯ ಕಟ್ಟಡವಾಗಿದ್ದು, ಇದನ್ನು ಮೈಸೂರು ನಗರ ಪಾಲಿಕೆಯು ಇದುವರೆಗೂ ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡದ ಕಾರಣ, ಸದ್ಯಕ್ಕೆ ಬೀಗ ಹಾಕಲಾಗಿದೆ ಎನ್ನುತ್ತಿದ್ದಾರೆ.

ಕಾರಣ ಏನೇ ಇರಲಿ, ಇದರಿಂದ ಈ ಭಾಗದ ಸಾರ್ವಜನಿಕರಿಗೆ ಅದರಲ್ಲೂ ಅನಾರೋಗ್ಯಕ್ಕೆ ತುತ್ತಾದ ಹಿರಿಯ ನಾಗರಿಕರು, ಮತ್ತು ಮಹಿಳೆಯರಿಗೆ ತೀವ್ರ ಅನನುಕೂಲವಾಗಿದೆ. ಅನಾರೋಗ್ಯಕ್ಕೆ ತುತ್ತಾದವರು ಪಕ್ಕದ, ಜಯನಗರದ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಆಸ್ಪತ್ರೆಯ ಆವರಣ ಈಗ ದನ – ಕರುಗಳು, ನಾಯಿಗಳ ತಂಗುದಾಣವಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಗಮನ ಹರಿಸಿ, ಕೂಡಲೇ ಈ ಆರೋಗ್ಯ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು.

-ಬೂಕನಕೆರೆ ವಿಜೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

1 hour ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

2 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

2 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

2 hours ago

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ

ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…

2 hours ago

ಮುಂಗಾರು ಮುನಿದರೂ ಬೆಳೆ ವಿಮೆಗಿಲ್ಲ ರೈತರ ಆಸಕ್ತಿ

ಗಿರೀಶ್ ಹುಣಸೂರು ಜಿಲ್ಲೆಯಲ್ಲಿ ಈವರೆಗೆ ೬,೯೧೦ ರೈತರಿಂದಷ್ಟೇ ಬೆಳೆ ವಿಮೆ ನೋಂದಣಿ ಮೈಸೂರು: ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಿಂದಾಗಿ ಪ್ರಸಕ್ತ ವರ್ಷ…

2 hours ago