ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿಯಲ್ಲಿರುವ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ನೀನು ಪೌರಕಾರ್ಮಿಕ ವರ್ಗಕ್ಕೆ ಸೇರಿದವಳು, ಹಾಲಿನ ಪರೀಕ್ಷೆ ಮಾಡುವುದು ಬೇಡ’ ಎಂದು ನಿರ್ಬಂಧ ಹೇರಿರುವುದಾಗಿ ವರದಿಯಾಗಿದೆ.
ದೇಶ ಎಷ್ಟೆಲ್ಲ ಅಭಿವೃದ್ಧಿ ಸಾಧಿಸುತ್ತಿದ್ದರೂ ಹಲವು ಕಡೆ ಅಸ್ಪೃಶ್ಯತೆ ಆಚರಣೆ ಚಾಲ್ತಿಯಲ್ಲಿರುವುದು ನಾಚಿಕೆಗೇಡಿನ ಸಂಗತಿ. ಈ ಮಹಿಳೆ ಕಳೆದ 2 ವರ್ಷಗಳಿಂದ ಇದೇ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಕೆಲದಿನಗಳು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನಂತರ ಅವರು ಮತ್ತೆ ಕೆಲಸಕ್ಕೆ ಹಾಜರಾದ ಸಂದರ್ಭದಲ್ಲಿ ಈ ರೀತಿ ನಿರ್ಬಂಧ ಹೇರಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರು ಜಿಲ್ಲಾ ಮಟ್ಟದ ಪ.ಜಾತಿ, ಪ.ಪಂಗಡಗಳ ಕುಂದು ಕೊರತೆಯ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡು ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅಸ್ಪೃಶ್ಯತೆ ಆಚರಣೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಂಡು ಈ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…