ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿಯಲ್ಲಿರುವ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ನೀನು ಪೌರಕಾರ್ಮಿಕ ವರ್ಗಕ್ಕೆ ಸೇರಿದವಳು, ಹಾಲಿನ ಪರೀಕ್ಷೆ ಮಾಡುವುದು ಬೇಡ’ ಎಂದು ನಿರ್ಬಂಧ ಹೇರಿರುವುದಾಗಿ ವರದಿಯಾಗಿದೆ.
ದೇಶ ಎಷ್ಟೆಲ್ಲ ಅಭಿವೃದ್ಧಿ ಸಾಧಿಸುತ್ತಿದ್ದರೂ ಹಲವು ಕಡೆ ಅಸ್ಪೃಶ್ಯತೆ ಆಚರಣೆ ಚಾಲ್ತಿಯಲ್ಲಿರುವುದು ನಾಚಿಕೆಗೇಡಿನ ಸಂಗತಿ. ಈ ಮಹಿಳೆ ಕಳೆದ 2 ವರ್ಷಗಳಿಂದ ಇದೇ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಕೆಲದಿನಗಳು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನಂತರ ಅವರು ಮತ್ತೆ ಕೆಲಸಕ್ಕೆ ಹಾಜರಾದ ಸಂದರ್ಭದಲ್ಲಿ ಈ ರೀತಿ ನಿರ್ಬಂಧ ಹೇರಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರು ಜಿಲ್ಲಾ ಮಟ್ಟದ ಪ.ಜಾತಿ, ಪ.ಪಂಗಡಗಳ ಕುಂದು ಕೊರತೆಯ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡು ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅಸ್ಪೃಶ್ಯತೆ ಆಚರಣೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಂಡು ಈ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…