ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿಯಲ್ಲಿರುವ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ನೀನು ಪೌರಕಾರ್ಮಿಕ ವರ್ಗಕ್ಕೆ ಸೇರಿದವಳು, ಹಾಲಿನ ಪರೀಕ್ಷೆ ಮಾಡುವುದು ಬೇಡ’ ಎಂದು ನಿರ್ಬಂಧ ಹೇರಿರುವುದಾಗಿ ವರದಿಯಾಗಿದೆ.
ದೇಶ ಎಷ್ಟೆಲ್ಲ ಅಭಿವೃದ್ಧಿ ಸಾಧಿಸುತ್ತಿದ್ದರೂ ಹಲವು ಕಡೆ ಅಸ್ಪೃಶ್ಯತೆ ಆಚರಣೆ ಚಾಲ್ತಿಯಲ್ಲಿರುವುದು ನಾಚಿಕೆಗೇಡಿನ ಸಂಗತಿ. ಈ ಮಹಿಳೆ ಕಳೆದ 2 ವರ್ಷಗಳಿಂದ ಇದೇ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಕೆಲದಿನಗಳು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನಂತರ ಅವರು ಮತ್ತೆ ಕೆಲಸಕ್ಕೆ ಹಾಜರಾದ ಸಂದರ್ಭದಲ್ಲಿ ಈ ರೀತಿ ನಿರ್ಬಂಧ ಹೇರಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರು ಜಿಲ್ಲಾ ಮಟ್ಟದ ಪ.ಜಾತಿ, ಪ.ಪಂಗಡಗಳ ಕುಂದು ಕೊರತೆಯ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡು ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅಸ್ಪೃಶ್ಯತೆ ಆಚರಣೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಂಡು ಈ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…