ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು ಒಡೆಯರ್ ಮನೆತನವನ್ನು ಸ್ಮರಿಸಿ, ಗೌರವಿಸಿ, ಮುಂದಿನ ತಲೆಮಾರಿಗೆ ಮೈಸೂರಿನ ಇತಿಹಾಸ, ಪರಂಪರೆಯನ್ನು ತಿಳಿಸುವ ದೃಷ್ಟಿಯಿಂದ ಒಡೆಯರ್ ಅವರುಗಳ ಪೋಸ್ಟ್ ಕಾರ್ಡ್ ಹೊರತಂದಿರುವುದು ಶ್ಲಾಘನೀಯ. ನಾಡ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಸಹಿತ ಅರಮನೆ ಹಾಗೂ ಮೈಸೂರು ಒಡೆಯರ್ ಸಂಸ್ಥಾನದ ಐವರು ಮಹಾನ್ ವ್ಯಕ್ತಿಗಳಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ಹತ್ತನೇ ಚಾಮರಾಜ ಒಡೆಯರ್, ಮಹಾರಾಣಿಕೆಂಪುನಂಜಮ್ಮಣ್ಣಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಜಯಚಾಮರಾಜೇಂದ್ರ ಒಡೆಯರ್ ಅವರುಗಳು ಮೈಸೂರು ಸಂಸ್ಥಾನದ ಬೆಳವಣಿಗೆಗೆ ನೀಡಿದ ಕೊಡುಗೆಗಳನ್ನು ದೇಶಕ್ಕೆ ಪರಿಚಯಿಸುವ ದೃಷ್ಟಿಯಿಂದ ಮೈಸೂರಿನ ಹಿರಿಮೆ – ಗರಿಮೆಯನ್ನು ಗೌರವಿಸುವ ಮಹತ್ಕಾರ್ಯವನ್ನು ಮಾಡಿರುವ ಭಾರತೀಯ ಅಂಚೆ ಇಲಾಖೆಯ ಕೆಲಸ ಸ್ವಾಗತಾರ್ಹ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…