ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ ಪುರುಷರಿಗಷ್ಟೇ ಪ್ರಾತಿನಿಧ್ಯ ದೊರೆಯುತ್ತಿದ್ದು, ಬೆರಳೆಣಿಕೆಯಷ್ಟು ಮಾತ್ರ ಮಹಿಳಾ ಪ್ರತಿನಿಧಿಗಳಿರುತ್ತಾರೆ. ಇನ್ನೂ ಕೆಲವು ಕಡೆ ಮಹಿಳೆಯರಿಗೆ ಪ್ರಾತಿ ನಿಧ್ಯವೇ ಇರುವುದಿಲ್ಲ.
ರಾಜಕಾರಣಿಗಳು, ಅಧಿಕಾರಿಗಳು ಸಭೆ ಸಮಾರಂಭಗಳಲ್ಲಿ ಮಾತೆತ್ತಿದರೆ ಮಹಿಳೆಯರು ಪುರುಷರಷ್ಟೇ ಸಮಾನರು, ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಹೇಳುವುದು ಕ್ಷೀಷೆಯಾಗಿದೆಯೇ ಹೊರತು ಮಹಿಳೆಯರು ಪುರುಷರಷ್ಟೇ ಸರಿಸಮಾನರು ಎಂಬ ದೃಷ್ಟಿಯಿಂದ ನೋಡದೇ ಇರುವುದು ವಿಷಾದಕರ ಸಂಗತಿಯಾಗಿದೆ. ಶಾಸನ ಸಭೆಗಳಲ್ಲಿ ಶೇ. ೩೩ರಷ್ಟು ಮಹಿಳಾ ಮೀಸಲಾತಿಗಾಗಿ ದನಿ ಎತ್ತುತ್ತಿರುವ ಈ ಸಂದರ್ಭದಲ್ಲಿ ಸಾಂಸ್ಕೃತಿಕ ವೇದಿಕೆಗಳಲ್ಲೇ ಮಹಿಳಾ ಪ್ರಾತಿನಿಧ್ಯ ಇಲ್ಲದಿರುವುದು ಪುರುಷ ಪ್ರಧಾನ ವ್ಯವಸ್ಥೆಯ ಮೇಲಧಿಕಾರವನ್ನು ಎತ್ತಿ ತೋರಿಸುತ್ತದೆ. ಇದು ಖಂಡನೀಯ. ಸಂಬಂಧಪಟ್ಟವರು ಇನ್ನು ಮುಂದಾದರೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವುದು ಅತ್ಯಗತ್ಯ.
– ಸುಶೀಲ, ಡಾ.ರತಿರಾವ್, ಎಚ್.ಎಂ. ಹೇಮಲತ, ನಾ.ದಿವಾಕರ, ಮೈಸೂರು
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…