ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ ಪುರುಷರಿಗಷ್ಟೇ ಪ್ರಾತಿನಿಧ್ಯ ದೊರೆಯುತ್ತಿದ್ದು, ಬೆರಳೆಣಿಕೆಯಷ್ಟು ಮಾತ್ರ ಮಹಿಳಾ ಪ್ರತಿನಿಧಿಗಳಿರುತ್ತಾರೆ. ಇನ್ನೂ ಕೆಲವು ಕಡೆ ಮಹಿಳೆಯರಿಗೆ ಪ್ರಾತಿ ನಿಧ್ಯವೇ ಇರುವುದಿಲ್ಲ.
ರಾಜಕಾರಣಿಗಳು, ಅಧಿಕಾರಿಗಳು ಸಭೆ ಸಮಾರಂಭಗಳಲ್ಲಿ ಮಾತೆತ್ತಿದರೆ ಮಹಿಳೆಯರು ಪುರುಷರಷ್ಟೇ ಸಮಾನರು, ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಹೇಳುವುದು ಕ್ಷೀಷೆಯಾಗಿದೆಯೇ ಹೊರತು ಮಹಿಳೆಯರು ಪುರುಷರಷ್ಟೇ ಸರಿಸಮಾನರು ಎಂಬ ದೃಷ್ಟಿಯಿಂದ ನೋಡದೇ ಇರುವುದು ವಿಷಾದಕರ ಸಂಗತಿಯಾಗಿದೆ. ಶಾಸನ ಸಭೆಗಳಲ್ಲಿ ಶೇ. ೩೩ರಷ್ಟು ಮಹಿಳಾ ಮೀಸಲಾತಿಗಾಗಿ ದನಿ ಎತ್ತುತ್ತಿರುವ ಈ ಸಂದರ್ಭದಲ್ಲಿ ಸಾಂಸ್ಕೃತಿಕ ವೇದಿಕೆಗಳಲ್ಲೇ ಮಹಿಳಾ ಪ್ರಾತಿನಿಧ್ಯ ಇಲ್ಲದಿರುವುದು ಪುರುಷ ಪ್ರಧಾನ ವ್ಯವಸ್ಥೆಯ ಮೇಲಧಿಕಾರವನ್ನು ಎತ್ತಿ ತೋರಿಸುತ್ತದೆ. ಇದು ಖಂಡನೀಯ. ಸಂಬಂಧಪಟ್ಟವರು ಇನ್ನು ಮುಂದಾದರೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವುದು ಅತ್ಯಗತ್ಯ.
– ಸುಶೀಲ, ಡಾ.ರತಿರಾವ್, ಎಚ್.ಎಂ. ಹೇಮಲತ, ನಾ.ದಿವಾಕರ, ಮೈಸೂರು
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…