Andolana originals

ಓದುಗರ ಪತ್ರ:  ಕನ್ನಡ ಭಾಷೆ ಉಳಿವಿಗೆ ಶ್ರಮಿಸಿ

ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ ಭಾಷೆಗೆ ನೀಡಿದ ಕೊಡುಗೆ ಅಪರಿಮಿತ. ಅವರ ದೂರದೃಷ್ಟಿ ಮತ್ತು ಕನ್ನಡಾಭಿ ಮಾನದ ಫಲವಾಗಿ ಕರ್ನಾಟಕ ರಾಜ್ಯ ರೂಪುಗೊಂಡಿದೆ.

ಹಲ್ಮಿಡಿ ಶಾಸನದಿಂದ ಆರಂಭಗೊಂಡು, ಜ್ಞಾನಪೀಠ ಪ್ರಶಸ್ತಿಗಳ ಗರಿಮೆಯವರೆಗೆ ಕನ್ನಡದ ಹಿರಿಮೆ ಅಜರಾಮರ. ಇಂತಹ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೊಂದಿರುವ ನಮ್ಮ ನಡುವೆಯೇ, ನಗರ ಪ್ರದೇಶಗಳಲ್ಲಿ ಕನ್ನಡ ಬಂದರೂ ಮಾತನಾಡಲು ಹಿಂಜರಿಯುವ ಮನಸ್ಥಿತಿ ಬೆಳೆಯುತ್ತಿರುವುದು ಆತಂಕಕಾರಿ. ಆಂಗ್ಲಭಾಷಾ ವ್ಯಾಮೋಹ ಕನ್ನಡಿಗರನ್ನು ಅವರದೇ ಮಾತೃಭಾಷೆಯಿಂದ ದೂರ ಮಾಡುತ್ತಿದೆ. ಇಂಗ್ಲಿಷ್ ಕಲಿತರೆ ಮಾತ್ರ ಉತ್ತಮ ಉದ್ಯೋಗ, ಪ್ರತಿಷ್ಠೆ ಎಂಬ ಭ್ರಮೆ ಸಮಾಜದಲ್ಲಿ ಆಳವಾಗಿ ಬೇರೂರಿದೆ.

ಜ್ಞಾನಾರ್ಜನೆಗೆ ಯಾವುದೇ ಭಾಷೆ ಅಡ್ಡಿಯಾಗಬಾರದು ನಿಜ. ಆದರೆ, ಬೇರೆ ಭಾಷೆಯ ವ್ಯಾಮೋಹಕ್ಕೆ ಬಿದ್ದು ಮಾತೃಭಾಷೆಯನ್ನು ಕಡೆಗಣಿಸುವುದು, ನಮ್ಮ ಅಸ್ಮಿತೆಯನ್ನೇ ಕಳೆದುಕೊಂಡಂತೆಯೇ ಸರಿ. ೭೦ನೇ ಕನ್ನಡ ರಾಜ್ಯೋತ್ಸವದ ಈ ಹೊತ್ತಿನಲ್ಲಿ, ಪ್ರತಿಯೊಬ್ಬ ಕನ್ನಡಿಗನೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮನೆ, ಕಚೇರಿ ಮತ್ತು ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಬಳಸುವ ಮೂಲಕ, ನಮ್ಮ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾತೃಭಾಷೆಯ ಮೇಲಿನ ಪ್ರೀತಿ ಕೇವಲ ನವೆಂಬರ್ ೧ಕ್ಕೆ ಸೀಮಿತವಾಗದೆ, ಪ್ರತಿದಿನವೂ ಹರಿಯುವ ಜೀವಂತ ಪ್ರವಾಹವಾಗಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

ಆಂದೋಲನ ಡೆಸ್ಕ್

Recent Posts

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

58 mins ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

3 hours ago