ಓದುಗರ ಪತ್ರ
ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ ಭಾಷೆಗೆ ನೀಡಿದ ಕೊಡುಗೆ ಅಪರಿಮಿತ. ಅವರ ದೂರದೃಷ್ಟಿ ಮತ್ತು ಕನ್ನಡಾಭಿ ಮಾನದ ಫಲವಾಗಿ ಕರ್ನಾಟಕ ರಾಜ್ಯ ರೂಪುಗೊಂಡಿದೆ.
ಹಲ್ಮಿಡಿ ಶಾಸನದಿಂದ ಆರಂಭಗೊಂಡು, ಜ್ಞಾನಪೀಠ ಪ್ರಶಸ್ತಿಗಳ ಗರಿಮೆಯವರೆಗೆ ಕನ್ನಡದ ಹಿರಿಮೆ ಅಜರಾಮರ. ಇಂತಹ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೊಂದಿರುವ ನಮ್ಮ ನಡುವೆಯೇ, ನಗರ ಪ್ರದೇಶಗಳಲ್ಲಿ ಕನ್ನಡ ಬಂದರೂ ಮಾತನಾಡಲು ಹಿಂಜರಿಯುವ ಮನಸ್ಥಿತಿ ಬೆಳೆಯುತ್ತಿರುವುದು ಆತಂಕಕಾರಿ. ಆಂಗ್ಲಭಾಷಾ ವ್ಯಾಮೋಹ ಕನ್ನಡಿಗರನ್ನು ಅವರದೇ ಮಾತೃಭಾಷೆಯಿಂದ ದೂರ ಮಾಡುತ್ತಿದೆ. ಇಂಗ್ಲಿಷ್ ಕಲಿತರೆ ಮಾತ್ರ ಉತ್ತಮ ಉದ್ಯೋಗ, ಪ್ರತಿಷ್ಠೆ ಎಂಬ ಭ್ರಮೆ ಸಮಾಜದಲ್ಲಿ ಆಳವಾಗಿ ಬೇರೂರಿದೆ.
ಜ್ಞಾನಾರ್ಜನೆಗೆ ಯಾವುದೇ ಭಾಷೆ ಅಡ್ಡಿಯಾಗಬಾರದು ನಿಜ. ಆದರೆ, ಬೇರೆ ಭಾಷೆಯ ವ್ಯಾಮೋಹಕ್ಕೆ ಬಿದ್ದು ಮಾತೃಭಾಷೆಯನ್ನು ಕಡೆಗಣಿಸುವುದು, ನಮ್ಮ ಅಸ್ಮಿತೆಯನ್ನೇ ಕಳೆದುಕೊಂಡಂತೆಯೇ ಸರಿ. ೭೦ನೇ ಕನ್ನಡ ರಾಜ್ಯೋತ್ಸವದ ಈ ಹೊತ್ತಿನಲ್ಲಿ, ಪ್ರತಿಯೊಬ್ಬ ಕನ್ನಡಿಗನೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮನೆ, ಕಚೇರಿ ಮತ್ತು ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಬಳಸುವ ಮೂಲಕ, ನಮ್ಮ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾತೃಭಾಷೆಯ ಮೇಲಿನ ಪ್ರೀತಿ ಕೇವಲ ನವೆಂಬರ್ ೧ಕ್ಕೆ ಸೀಮಿತವಾಗದೆ, ಪ್ರತಿದಿನವೂ ಹರಿಯುವ ಜೀವಂತ ಪ್ರವಾಹವಾಗಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…
ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ನ್ನು 96 ರನ್ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್ನಲ್ಲಿ…
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…