ಓದುಗರ ಪತ್ರ
ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ ಭಾಷೆಗೆ ನೀಡಿದ ಕೊಡುಗೆ ಅಪರಿಮಿತ. ಅವರ ದೂರದೃಷ್ಟಿ ಮತ್ತು ಕನ್ನಡಾಭಿ ಮಾನದ ಫಲವಾಗಿ ಕರ್ನಾಟಕ ರಾಜ್ಯ ರೂಪುಗೊಂಡಿದೆ.
ಹಲ್ಮಿಡಿ ಶಾಸನದಿಂದ ಆರಂಭಗೊಂಡು, ಜ್ಞಾನಪೀಠ ಪ್ರಶಸ್ತಿಗಳ ಗರಿಮೆಯವರೆಗೆ ಕನ್ನಡದ ಹಿರಿಮೆ ಅಜರಾಮರ. ಇಂತಹ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೊಂದಿರುವ ನಮ್ಮ ನಡುವೆಯೇ, ನಗರ ಪ್ರದೇಶಗಳಲ್ಲಿ ಕನ್ನಡ ಬಂದರೂ ಮಾತನಾಡಲು ಹಿಂಜರಿಯುವ ಮನಸ್ಥಿತಿ ಬೆಳೆಯುತ್ತಿರುವುದು ಆತಂಕಕಾರಿ. ಆಂಗ್ಲಭಾಷಾ ವ್ಯಾಮೋಹ ಕನ್ನಡಿಗರನ್ನು ಅವರದೇ ಮಾತೃಭಾಷೆಯಿಂದ ದೂರ ಮಾಡುತ್ತಿದೆ. ಇಂಗ್ಲಿಷ್ ಕಲಿತರೆ ಮಾತ್ರ ಉತ್ತಮ ಉದ್ಯೋಗ, ಪ್ರತಿಷ್ಠೆ ಎಂಬ ಭ್ರಮೆ ಸಮಾಜದಲ್ಲಿ ಆಳವಾಗಿ ಬೇರೂರಿದೆ.
ಜ್ಞಾನಾರ್ಜನೆಗೆ ಯಾವುದೇ ಭಾಷೆ ಅಡ್ಡಿಯಾಗಬಾರದು ನಿಜ. ಆದರೆ, ಬೇರೆ ಭಾಷೆಯ ವ್ಯಾಮೋಹಕ್ಕೆ ಬಿದ್ದು ಮಾತೃಭಾಷೆಯನ್ನು ಕಡೆಗಣಿಸುವುದು, ನಮ್ಮ ಅಸ್ಮಿತೆಯನ್ನೇ ಕಳೆದುಕೊಂಡಂತೆಯೇ ಸರಿ. ೭೦ನೇ ಕನ್ನಡ ರಾಜ್ಯೋತ್ಸವದ ಈ ಹೊತ್ತಿನಲ್ಲಿ, ಪ್ರತಿಯೊಬ್ಬ ಕನ್ನಡಿಗನೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮನೆ, ಕಚೇರಿ ಮತ್ತು ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಬಳಸುವ ಮೂಲಕ, ನಮ್ಮ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾತೃಭಾಷೆಯ ಮೇಲಿನ ಪ್ರೀತಿ ಕೇವಲ ನವೆಂಬರ್ ೧ಕ್ಕೆ ಸೀಮಿತವಾಗದೆ, ಪ್ರತಿದಿನವೂ ಹರಿಯುವ ಜೀವಂತ ಪ್ರವಾಹವಾಗಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…