ಓದುಗರ ಪತ್ರ
ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ ಭಾಷೆಗೆ ನೀಡಿದ ಕೊಡುಗೆ ಅಪರಿಮಿತ. ಅವರ ದೂರದೃಷ್ಟಿ ಮತ್ತು ಕನ್ನಡಾಭಿ ಮಾನದ ಫಲವಾಗಿ ಕರ್ನಾಟಕ ರಾಜ್ಯ ರೂಪುಗೊಂಡಿದೆ.
ಹಲ್ಮಿಡಿ ಶಾಸನದಿಂದ ಆರಂಭಗೊಂಡು, ಜ್ಞಾನಪೀಠ ಪ್ರಶಸ್ತಿಗಳ ಗರಿಮೆಯವರೆಗೆ ಕನ್ನಡದ ಹಿರಿಮೆ ಅಜರಾಮರ. ಇಂತಹ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೊಂದಿರುವ ನಮ್ಮ ನಡುವೆಯೇ, ನಗರ ಪ್ರದೇಶಗಳಲ್ಲಿ ಕನ್ನಡ ಬಂದರೂ ಮಾತನಾಡಲು ಹಿಂಜರಿಯುವ ಮನಸ್ಥಿತಿ ಬೆಳೆಯುತ್ತಿರುವುದು ಆತಂಕಕಾರಿ. ಆಂಗ್ಲಭಾಷಾ ವ್ಯಾಮೋಹ ಕನ್ನಡಿಗರನ್ನು ಅವರದೇ ಮಾತೃಭಾಷೆಯಿಂದ ದೂರ ಮಾಡುತ್ತಿದೆ. ಇಂಗ್ಲಿಷ್ ಕಲಿತರೆ ಮಾತ್ರ ಉತ್ತಮ ಉದ್ಯೋಗ, ಪ್ರತಿಷ್ಠೆ ಎಂಬ ಭ್ರಮೆ ಸಮಾಜದಲ್ಲಿ ಆಳವಾಗಿ ಬೇರೂರಿದೆ.
ಜ್ಞಾನಾರ್ಜನೆಗೆ ಯಾವುದೇ ಭಾಷೆ ಅಡ್ಡಿಯಾಗಬಾರದು ನಿಜ. ಆದರೆ, ಬೇರೆ ಭಾಷೆಯ ವ್ಯಾಮೋಹಕ್ಕೆ ಬಿದ್ದು ಮಾತೃಭಾಷೆಯನ್ನು ಕಡೆಗಣಿಸುವುದು, ನಮ್ಮ ಅಸ್ಮಿತೆಯನ್ನೇ ಕಳೆದುಕೊಂಡಂತೆಯೇ ಸರಿ. ೭೦ನೇ ಕನ್ನಡ ರಾಜ್ಯೋತ್ಸವದ ಈ ಹೊತ್ತಿನಲ್ಲಿ, ಪ್ರತಿಯೊಬ್ಬ ಕನ್ನಡಿಗನೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮನೆ, ಕಚೇರಿ ಮತ್ತು ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಬಳಸುವ ಮೂಲಕ, ನಮ್ಮ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾತೃಭಾಷೆಯ ಮೇಲಿನ ಪ್ರೀತಿ ಕೇವಲ ನವೆಂಬರ್ ೧ಕ್ಕೆ ಸೀಮಿತವಾಗದೆ, ಪ್ರತಿದಿನವೂ ಹರಿಯುವ ಜೀವಂತ ಪ್ರವಾಹವಾಗಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…