ಓದುಗರ ಪತ್ರ
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ ಊಟ ಹಾಗೂ ತಿಂಡಿ, ಕಾಫಿ, ಟೀ ದರ ಏರಿಕೆಯಾಗಿ ಜನ ಸಾಮಾನ್ಯರ ಮೇಲೆ ಹೊರೆ ಬೀಳುತ್ತದೆ ಹಾಗೂ ಮದುವೆ ಮೊದಲಾದ ಸಮಾರಂಭಗಳಿಗೂ ವಾಣಿಜ್ಯ ಸಿಲಿಂಡರ್ಗಳನ್ನೇ ಬಳಸುವುದರಿಂದ ಸಮಾರಂಭಗಳನ್ನು ಆಯೋಜಿಸುವವರಿಗೆ ಆರ್ಥಿಕವಾಗಿ ಹೊರೆಯಾಗುತ್ತದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಈ ವರೆಗೂ ನೂರಿನ್ನೂರು ರೂ. ಹೆಚ್ಚಳ ಮಾಡುತ್ತಿದ್ದುದು ಸಹಜ ಆದರೆ ಏಕಾಏಕಿ ೯೯೧ರೂ. ಹೆಚ್ಚಳ ಮಾಡಿರುವುದರಿಂದ ಹೋಟೆಲ್ ಉದ್ಯಮದವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಸಿಲಿಂಡರ್ ಅಭಾವದಿಂದ ತೀವ್ರ ಕಂಗಾಲಾಗಿ ಹೋಟೆಲ್ಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದ ಹೋಟೆಲ್ ಮಾಲೀಕರು ಸಿಲಿಂಡರ್ ದರ ಏರಿಕೆ ಹೊರೆಯಿಂದಾಗಿ ಹೋಟೆಲ್ಗಳನ್ನು ಶಾಶ್ವತವಾಗಿ ಮುಚ್ಚುವುದು ಅನಿವಾರ್ಯವಾಗುತ್ತದೆ. ಕೇಂದ್ರ ಸರ್ಕಾರ ಕೂಡಲೇ ದರ ಏರಿಕೆಯನ್ನು ಹಿಂಪಡೆಯುವ ಮೂಲಕ ಹೋಟೆಲ್ ಉದ್ಯಮದವರ ಹಿತ ಕಾಪಾಡುವುದು ಅಗತ್ಯ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…