ಖಾಸಗಿ ಬ್ಯಾಂಕೊಂದಕ್ಕೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹಾಗೂ ಇತರೆ ಮೂವರು ಆರೋಪಿಗಳಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಮಾಜಿ ಸಚಿವರಿಗೆ ಶಿಕ್ಷೆ ಪ್ರಕಟಿಸಿದ್ದರೂ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅವರ ಜಾಮೀನು ಅರ್ಜಿಯನ್ನೂ ಅಂಗೀಕರಿಸಿ, ಜಾಮೀನು ನೀಡಲಾಗಿದೆ. ಸುಮಾರು ೩೨ ವರ್ಷಗಳಿಂದ ನಡೆಯುತ್ತಿದ್ದ ಈ ಪ್ರಕರಣದ ವಿಚಾರಣೆ ಈಗ ಒಂದು ಘಟಕ್ಕೆ ತಲುಪಿದ್ದರೂ ಆರೋಪಿಗಳಿಗೆ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯಗಳ ಮೊರೆ ಹೋಗುವ ಅವಕಾಶವಿರುವುದರಿಂದ ಈ ಪ್ರಕರಣ ಮತ್ತಷ್ಟು ವರ್ಷಗಳ ಕಾಲ ನಡೆಯಬಹುದು. ಈ ಪ್ರಕರಣ ನಡೆದು ಈಗಾಗಲೇ ೩೨ ವರ್ಷಗಳಾಗಿವೆ. ಈ ಪ್ರಕರಣದ ಇತ್ಯರ್ಥಕ್ಕೆ ಇಷ್ಟೊಂದು ದೀರ್ಘ ಅವಧಿ ಏಕೆ ಬೇಕಾಯಿತು ಎಂಬುದೇ ಯಕ್ಷ ಪ್ರಶ್ನೆ!
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…