Andolana originals

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ. ಆದರೆ ಈ ಯೋಜನೆಯನ್ನು ಡಯಾಲಿಸಿಸ್ ಚಿಕಿತ್ಸಾ ಸೌಲಭ್ಯದಿಂದ ಹೊರಗಿಟ್ಟಿರುವುದು ಬೇಸರದ ಸಂಗತಿಯಾಗಿದೆ.

ಪ್ರತಿ ಬಾರಿ ಡಯಾಲಿಸಿಸ್‌ಗೆ ೧,೩೦೦ ರೂ. ಪಾವತಿಸಬೇಕು. ವಾರಕ್ಕೆ ೩ ಬಾರಿ ೧೩೦೦ ರೂ. ಕೊಟ್ಟು ಡಯಾಲಿಸಿಸ್ ಮಾಡಿಸುವುದು ಬಡ ಹಾಗೂ ಕೂಲಿ ಕಾರ್ಮಿಕರಿಗೆ ಕಷ್ಟವಾಗುತ್ತದೆ. ಹಣದ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದಿದ್ದರೆ ರೋಗಿ ಸಾವನ್ನಪ್ಪುವ ಸಾಧ್ಯತೆಯಿರುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ತುರ್ತು ಗಮನ ಹರಿಸಿ ಯಶಸ್ವಿನಿ ಯೋಜನೆಯಲ್ಲಿ ಡಯಾಲಿಸಿಸ್ ವೆಚ್ಚ ಭರಿಸುವಂತಾಗಲಿ. ಹಾಗೂ ಇದೇ ರೀತಿ ಹೃದಯ ಸಂಬಂಧಿ ಅಂಜಿಯೋಗ್ರಾಮ್ ವೆಚ್ಚವನ್ನು ಕೂಡ ಯಶಸ್ವಿನಿ /ಬಿ ಪಿ ಎಲ್ ವರ್ಗದವರಿಗೆ ಭರಿಸುವಂತೆ ಸರ್ಕಾರ ಆದೇಶ ಮಾಡಲಿ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

1 hour ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

1 hour ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago