ಮೈಸೂರಿನಲ್ಲಿ ಜೂ.೨೧ರಂದು ನಡೆದ ಯೋಗ ದಿನಾಚರಣೆ, ರಾಜಕೀಯ ಹೇಗೆ ಒಂದು ಶ್ರೇಷ್ಠ ಆಚರಣೆಯ ಅಂತರಾಳವನ್ನು ವಶಪಡಿಸಿಕೊಳ್ಳಬಹುದು ಎಂಬುದಕ್ಕೆ ಸ್ಪಷ್ಟ ನಿದರ್ಶನದಂತಿತ್ತು.
ಯೋಗದ ಉಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ನಡೆಯಬೇಕಾದ ಈ ಕಾರ್ಯಕ್ರಮ ರಾಜಕೀಯ ಪ್ರದರ್ಶನಕ್ಕೆ ವೇದಿಕೆಯಾಗಿದ್ದು ವಿಷಾದನೀಯ.
ಯೋಗ ಪ್ರದರ್ಶನಕ್ಕೆ ಮುಂಜಾನೆ ಸಮಯ ಸೂಕ್ತ, ಆದರೆ ಯೋಗ ದಿನಾಚರಣೆಯಂದು ರಾಜಕೀಯ ಅತಿಥಿಗಳ ಆಗಮನಕ್ಕಾಗಿ ಕಾಲಹರಣ ಮಾಡಲಾಯಿತು. ಕಾರ್ಯಕ್ರಮದ ಸಮಯವನ್ನು ಯೋಗದ ತಾತ್ವಿಕತೆಯಡಿ ರೂಪಿಸದೆ, ರಾಜಕೀಯ ನಾಯಕರ ಸಮಯಾನುಸಾರ ಆಯ್ಕೆ ಮಾಡಲಾಗಿತ್ತು. ರಾಜಕೀಯ ನಾಯಕರು ಆಗಮಿಸಿ ಬೆಳಿಗ್ಗೆ ೭.೩೦ರ ವೇಳೆಗೆ ಯೋಗ ಆರಂಭವಾಗುವ ಹೊತ್ತಿಗೆ ಭಾಗವಹಿಸಿದ್ದವರ ಉತ್ಸಾಹ ಕಡಿಮೆಯಾಗಿತ್ತು.
ಯೋಗದ ನಿಜವಾದ ಉದ್ದೇಶ ಈ ಎಲ್ಲಾ ಅವ್ಯವಸ್ಥೆಯ ಮಧ್ಯೆ ಮರೆಯಾಗಿ ಹೋಯಿತು. ರಾಜಕೀಯ ನಾಯಕರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಯೋಗ ದಿನಾಚರಣೆಯ ಮಹತ್ವವನ್ನು ಮರೆತಿದ್ದು ದುರದೃಷ್ಟಕರ.
-ಡಾ. ಅರುಣಾ ಆದರ್ಶ್
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…
ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…
ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…