ಓದುಗರ ಪತ್ರ
ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಳೆದ ಬಾರಿ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನಿಂದ ಹೊರಗೆ ಉತ್ತನಹಳ್ಳಿಯಲ್ಲಿ ಏರ್ಪಡಿಸಲಾಗಿತ್ತು.ಇದರಿಂದ ನಗರದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಹೋಗಲು ಸಾಧ್ಯವಾಗಲಿಲ್ಲ. ಇಷ್ಟು ವರ್ಷಗಳೂ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನ ಸ್ಥಳೀಯ ವಾಹಿನಿಗಳು ನೇರ ಪ್ರಸಾರ ಮಾಡುತ್ತಿದ್ದವು. ಇದರಿಂದ ಕಾರ್ಯಕ್ರಮಕ್ಕೆ ಹೋಗಲಾಗದವರು, ಹಿರಿಯರು, ಹೆಂಗಸರು, ಮಕ್ಕಳು ಮನೆಯಲ್ಲೇ ಕುಳಿತು ನೇರ ಪ್ರಸಾರದಲ್ಲಿ ವೀಕ್ಷಿಸಿ ಆನಂದಿಸುತ್ತಿದ್ದರು. ಆದರೆ ಕಳೆದ ಬಾರಿ ಆಯೋಜಕರು ಯುವ ದಸರಾ ನೇರ ಪ್ರಸಾರದ ಹಕ್ಕನ್ನು ಖಾಸಗಿ ಸಂಸ್ಥೆಗೆ ನೀಡಿದ್ದ ಕಾರಣಕ್ಕೆ ಜನರು ನೇರ ಪ್ರಸಾರ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಯುವ ದಸರಾ ಆಯೋಜಿಸಲು ಸರ್ಕಾರ ನೀಡುವ ಹಣ ಜನರ ತೆರಿಗೆಯ ಹಣವಾಗಿದೆ. ಆದ್ದರಿಂದ ಈ ಬಾರಿ ಅಂತಹ ಲೋಪವಾಗದಂತೆ, ಯಾರಿಗೂ ಹಕ್ಕನ್ನು ನೀಡದೇ ಸ್ಥಳೀಯ ವಾಹಿನಿಗಳಲ್ಲಿ ಪ್ರಸಾರ ಮಾಡಲು ಜಿಲ್ಲಾಡಳಿತ, ಸರ್ಕಾರ ಅನುಮತಿ ನೀಡಲಿ. ಈ ಬಗ್ಗೆ ಉಸ್ತುವಾರಿ ಸಚಿವರು ಗಮನಹರಿಸಬೇಕಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…