Andolana originals

ಓದುಗರ ಪತ್ರ:  ಸ್ಥಳೀಯ ವಾಹಿನಿಗಳಲ್ಲಿ ಯುವ ದಸರಾ ನೇರ ಪ್ರಸಾರವಾಗಲಿ

ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಳೆದ ಬಾರಿ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನಿಂದ ಹೊರಗೆ ಉತ್ತನಹಳ್ಳಿಯಲ್ಲಿ ಏರ್ಪಡಿಸಲಾಗಿತ್ತು.ಇದರಿಂದ ನಗರದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಹೋಗಲು ಸಾಧ್ಯವಾಗಲಿಲ್ಲ. ಇಷ್ಟು ವರ್ಷಗಳೂ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನ ಸ್ಥಳೀಯ ವಾಹಿನಿಗಳು ನೇರ ಪ್ರಸಾರ ಮಾಡುತ್ತಿದ್ದವು. ಇದರಿಂದ ಕಾರ್ಯಕ್ರಮಕ್ಕೆ ಹೋಗಲಾಗದವರು, ಹಿರಿಯರು, ಹೆಂಗಸರು, ಮಕ್ಕಳು ಮನೆಯಲ್ಲೇ ಕುಳಿತು ನೇರ ಪ್ರಸಾರದಲ್ಲಿ ವೀಕ್ಷಿಸಿ ಆನಂದಿಸುತ್ತಿದ್ದರು. ಆದರೆ ಕಳೆದ ಬಾರಿ ಆಯೋಜಕರು ಯುವ ದಸರಾ ನೇರ ಪ್ರಸಾರದ ಹಕ್ಕನ್ನು ಖಾಸಗಿ ಸಂಸ್ಥೆಗೆ ನೀಡಿದ್ದ ಕಾರಣಕ್ಕೆ ಜನರು ನೇರ ಪ್ರಸಾರ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಯುವ ದಸರಾ ಆಯೋಜಿಸಲು ಸರ್ಕಾರ ನೀಡುವ ಹಣ ಜನರ ತೆರಿಗೆಯ ಹಣವಾಗಿದೆ. ಆದ್ದರಿಂದ ಈ ಬಾರಿ ಅಂತಹ ಲೋಪವಾಗದಂತೆ, ಯಾರಿಗೂ ಹಕ್ಕನ್ನು ನೀಡದೇ ಸ್ಥಳೀಯ ವಾಹಿನಿಗಳಲ್ಲಿ ಪ್ರಸಾರ ಮಾಡಲು ಜಿಲ್ಲಾಡಳಿತ, ಸರ್ಕಾರ ಅನುಮತಿ ನೀಡಲಿ. ಈ ಬಗ್ಗೆ ಉಸ್ತುವಾರಿ ಸಚಿವರು ಗಮನಹರಿಸಬೇಕಿದೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

5 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

5 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

5 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

5 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

15 hours ago