ಓದುಗರ ಪತ್ರ
ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಳೆದ ಬಾರಿ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನಿಂದ ಹೊರಗೆ ಉತ್ತನಹಳ್ಳಿಯಲ್ಲಿ ಏರ್ಪಡಿಸಲಾಗಿತ್ತು.ಇದರಿಂದ ನಗರದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಹೋಗಲು ಸಾಧ್ಯವಾಗಲಿಲ್ಲ. ಇಷ್ಟು ವರ್ಷಗಳೂ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನ ಸ್ಥಳೀಯ ವಾಹಿನಿಗಳು ನೇರ ಪ್ರಸಾರ ಮಾಡುತ್ತಿದ್ದವು. ಇದರಿಂದ ಕಾರ್ಯಕ್ರಮಕ್ಕೆ ಹೋಗಲಾಗದವರು, ಹಿರಿಯರು, ಹೆಂಗಸರು, ಮಕ್ಕಳು ಮನೆಯಲ್ಲೇ ಕುಳಿತು ನೇರ ಪ್ರಸಾರದಲ್ಲಿ ವೀಕ್ಷಿಸಿ ಆನಂದಿಸುತ್ತಿದ್ದರು. ಆದರೆ ಕಳೆದ ಬಾರಿ ಆಯೋಜಕರು ಯುವ ದಸರಾ ನೇರ ಪ್ರಸಾರದ ಹಕ್ಕನ್ನು ಖಾಸಗಿ ಸಂಸ್ಥೆಗೆ ನೀಡಿದ್ದ ಕಾರಣಕ್ಕೆ ಜನರು ನೇರ ಪ್ರಸಾರ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಯುವ ದಸರಾ ಆಯೋಜಿಸಲು ಸರ್ಕಾರ ನೀಡುವ ಹಣ ಜನರ ತೆರಿಗೆಯ ಹಣವಾಗಿದೆ. ಆದ್ದರಿಂದ ಈ ಬಾರಿ ಅಂತಹ ಲೋಪವಾಗದಂತೆ, ಯಾರಿಗೂ ಹಕ್ಕನ್ನು ನೀಡದೇ ಸ್ಥಳೀಯ ವಾಹಿನಿಗಳಲ್ಲಿ ಪ್ರಸಾರ ಮಾಡಲು ಜಿಲ್ಲಾಡಳಿತ, ಸರ್ಕಾರ ಅನುಮತಿ ನೀಡಲಿ. ಈ ಬಗ್ಗೆ ಉಸ್ತುವಾರಿ ಸಚಿವರು ಗಮನಹರಿಸಬೇಕಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…