Andolana originals

ಓದುಗರ ಪತ್ರ: ಯುವ ದಸರಾದ ಸ್ಥಳ ಬದಲಾವಣೆ ಸ್ವಾಗತಾರ್ಹ

ದಸರಾ ಮಹೋತ್ಸವದ ಅಂಗವಾಗಿ ನಡೆಸುವ ‘ಯುವ ದಸರಾ’ ಕಾರ್ಯಕ್ರಮವನ್ನು ಮೊದಲ ಬಾರಿಗೆ ಚಾಮುಂಡಿಬೆಟ್ಟದ ಸಮೀಪದ ಉತ್ತನಹಳ್ಳಿ ಬಳಿ ಆಯೋಜಿಸಲು ಜಿಲ್ಲಾಡಳಿತ ತೀರ್ಮಾನಿಸಿರುವುದು ಸ್ವಾಗತಾರ್ಹ ಕ್ರಮ.

ಯುವ ದಸರಾ ಕಾರ್ಯಕ್ರಮವನ್ನು ಇಲ್ಲಿಯವರೆಗೂ ಮೈಸೂರಿನ ಹೃದಯ ಭಾಗವಾದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿತ್ತು. ಈ ಕಾರ್ಯಕ್ರಮಕ್ಕೆ ಸಿನಿಮಾ ನಟ-ನಟಿಯರು, ಖ್ಯಾತ ಗಾಯಕರು ಆಗಮಿಸುವುದರಿಂದ ಅವರನ್ನು ನೋಡುವ ಸಲುವಾಗಿ ಸಾಕಷ್ಟು ಜನರು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ.

ಮೈದಾನ ಚಿಕ್ಕದಾದ್ದರಿಂದ ಸ್ಥಳಾವಕಾಶದ ಕೊರತೆಯಿಂದ ಸಾಕಷ್ಟು ಮಂದಿ ರಸ್ತೆಯ ಅಕ್ಕಪಕ್ಕದಲ್ಲೇ ನಿಂತು ಕಾರ್ಯಕ್ರಮಗಳನ್ನು ವೀಕ್ಷಿಸಬೇಕಿತ್ತು. ಅಲ್ಲದೆ ನಗರದ ಮಧ್ಯ ಭಾಗದಲ್ಲಿಯೇ ನಡೆಯುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆಯೂ ಉಂಟಾಗುತ್ತಿತ್ತು. ಈಗ ಗುರುತಿಸಿರುವ ಸುಮಾರು ನೂರು ಎಕರೆ ಜಾಗದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಇರುವುದಲ್ಲದೇ ವರ್ತುಲ ರಸ್ತೆಯ ಸಮೀಪದಲ್ಲೇ ಇರುವುದರಿಂದ ವಾಹನ ಇರುವವರು ಬಂದು-ಹೋಗಲು ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಜಿಲ್ಲಾಡಳಿತದ ವತಿಯಿಂದ ಸಾರಿಗೆ ವ್ಯವಸ್ಥೆ ಕಲ್ಪಿಸಿದರೆ ವಾಹನಗಳಿಲ್ಲದವರಿಗೂ ಅನುಕೂಲವಾಗಲಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

 

ಆಂದೋಲನ ಡೆಸ್ಕ್

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

3 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

4 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

4 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

5 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

6 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

6 hours ago