Categories: Andolana originals

ಓದುಗರ ಪತ್ರ: ಉದ್ಯಾನವನಗಳಲ್ಲಿ ನಾಯಿಗಳ ದರ್ಬಾರ್

ಮೈಸೂರಿನ ಕುವೆಂಪು ನಗರದ ಎಂ-ಬ್ಲಾಕ್‌ನಲ್ಲಿರುವ ಬನಶಂಕರಿ ದೇವಸ್ಥಾನದ ಪಾರ್ಕ್‌ನಲ್ಲಿ ಶ್ರೀಮಂತರು ತಾವು ಸಾಕಿರುವ ನಾಯಿಗಳನ್ನು ಕಲ್ಲು -ಬೆಂಚ್‌ಗಳ ಮೇಲೆ ಗಂಟೆಗಟ್ಟಲೆ ಕೂರಿಸಿಕೊಂಡು, ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು, ವೃದ್ಧರು ಹಾಗೂ ಹಿರಿಯ ನಾಗರಿಕರು ವಾಯು ವಿಹಾರಕ್ಕೆ ಬಂದಾಗ ಸ್ವಲ್ಪ ಹೊತ್ತು ನೆಮ್ಮದಿಯಿಂದ ಕುಳಿತುಕೊಳ್ಳಲೂ ತೊಂದರೆಯಾಗುತ್ತಿದೆ.

ಕಲ್ಲು ಬೆಂಚುಗಳನ್ನು ಹಾಕಿರುವುದು, ಸಾರ್ವಜನಿಕರು ವಿಶ್ರಾಂತಿ ಪಡೆಯಲೋ ಅಥವಾ ಶ್ರೀಮಂತರು ಸಾಕಿರುವ ನಾಯಿಗಳನ್ನು ಕೂರಿಸಲೋ ಎನ್ನುವಂತಾಗಿದೆ.

ಇಷ್ಟೆ ಅಲ್ಲದೆ, ಈ ನಾಯಿಗಳು ಮಾಡುವ ಮಲ- ಮೂತ್ರವನ್ನು ಕತ್ತಲೆಯಲ್ಲಿ ವಾಕ್ ಮಾಡುವವರು ತುಳಿದುಕೊಂಡು ಹೋಗುತ್ತಿದ್ದು, ಮಾನಸಿಕವಾಗಿ ಹಿಂಸೆಯಾಗುತ್ತಿದೆ.

ಈ ಬಗ್ಗೆ ನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಪಾರ್ಕ್‌ಗಳಲ್ಲಿ ನಾಯಿಗಳ ಪ್ರವೇಶವನ್ನು ನಿಷೇಽಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

 -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

ಆಂದೋಲನ ಡೆಸ್ಕ್

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

3 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

4 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

4 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

5 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

6 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

7 hours ago