ಮೈಸೂರಿನ ಕುವೆಂಪು ನಗರದ ಎಂ-ಬ್ಲಾಕ್ನಲ್ಲಿರುವ ಬನಶಂಕರಿ ದೇವಸ್ಥಾನದ ಪಾರ್ಕ್ನಲ್ಲಿ ಶ್ರೀಮಂತರು ತಾವು ಸಾಕಿರುವ ನಾಯಿಗಳನ್ನು ಕಲ್ಲು -ಬೆಂಚ್ಗಳ ಮೇಲೆ ಗಂಟೆಗಟ್ಟಲೆ ಕೂರಿಸಿಕೊಂಡು, ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು, ವೃದ್ಧರು ಹಾಗೂ ಹಿರಿಯ ನಾಗರಿಕರು ವಾಯು ವಿಹಾರಕ್ಕೆ ಬಂದಾಗ ಸ್ವಲ್ಪ ಹೊತ್ತು ನೆಮ್ಮದಿಯಿಂದ ಕುಳಿತುಕೊಳ್ಳಲೂ ತೊಂದರೆಯಾಗುತ್ತಿದೆ.
ಕಲ್ಲು ಬೆಂಚುಗಳನ್ನು ಹಾಕಿರುವುದು, ಸಾರ್ವಜನಿಕರು ವಿಶ್ರಾಂತಿ ಪಡೆಯಲೋ ಅಥವಾ ಶ್ರೀಮಂತರು ಸಾಕಿರುವ ನಾಯಿಗಳನ್ನು ಕೂರಿಸಲೋ ಎನ್ನುವಂತಾಗಿದೆ.
ಇಷ್ಟೆ ಅಲ್ಲದೆ, ಈ ನಾಯಿಗಳು ಮಾಡುವ ಮಲ- ಮೂತ್ರವನ್ನು ಕತ್ತಲೆಯಲ್ಲಿ ವಾಕ್ ಮಾಡುವವರು ತುಳಿದುಕೊಂಡು ಹೋಗುತ್ತಿದ್ದು, ಮಾನಸಿಕವಾಗಿ ಹಿಂಸೆಯಾಗುತ್ತಿದೆ.
ಈ ಬಗ್ಗೆ ನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಪಾರ್ಕ್ಗಳಲ್ಲಿ ನಾಯಿಗಳ ಪ್ರವೇಶವನ್ನು ನಿಷೇಽಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…