Categories: Andolana originals

ಓದುಗರ ಪತ್ರ: ಉದ್ಯಾನವನಗಳಲ್ಲಿ ನಾಯಿಗಳ ದರ್ಬಾರ್

ಮೈಸೂರಿನ ಕುವೆಂಪು ನಗರದ ಎಂ-ಬ್ಲಾಕ್‌ನಲ್ಲಿರುವ ಬನಶಂಕರಿ ದೇವಸ್ಥಾನದ ಪಾರ್ಕ್‌ನಲ್ಲಿ ಶ್ರೀಮಂತರು ತಾವು ಸಾಕಿರುವ ನಾಯಿಗಳನ್ನು ಕಲ್ಲು -ಬೆಂಚ್‌ಗಳ ಮೇಲೆ ಗಂಟೆಗಟ್ಟಲೆ ಕೂರಿಸಿಕೊಂಡು, ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು, ವೃದ್ಧರು ಹಾಗೂ ಹಿರಿಯ ನಾಗರಿಕರು ವಾಯು ವಿಹಾರಕ್ಕೆ ಬಂದಾಗ ಸ್ವಲ್ಪ ಹೊತ್ತು ನೆಮ್ಮದಿಯಿಂದ ಕುಳಿತುಕೊಳ್ಳಲೂ ತೊಂದರೆಯಾಗುತ್ತಿದೆ.

ಕಲ್ಲು ಬೆಂಚುಗಳನ್ನು ಹಾಕಿರುವುದು, ಸಾರ್ವಜನಿಕರು ವಿಶ್ರಾಂತಿ ಪಡೆಯಲೋ ಅಥವಾ ಶ್ರೀಮಂತರು ಸಾಕಿರುವ ನಾಯಿಗಳನ್ನು ಕೂರಿಸಲೋ ಎನ್ನುವಂತಾಗಿದೆ.

ಇಷ್ಟೆ ಅಲ್ಲದೆ, ಈ ನಾಯಿಗಳು ಮಾಡುವ ಮಲ- ಮೂತ್ರವನ್ನು ಕತ್ತಲೆಯಲ್ಲಿ ವಾಕ್ ಮಾಡುವವರು ತುಳಿದುಕೊಂಡು ಹೋಗುತ್ತಿದ್ದು, ಮಾನಸಿಕವಾಗಿ ಹಿಂಸೆಯಾಗುತ್ತಿದೆ.

ಈ ಬಗ್ಗೆ ನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಪಾರ್ಕ್‌ಗಳಲ್ಲಿ ನಾಯಿಗಳ ಪ್ರವೇಶವನ್ನು ನಿಷೇಽಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

 -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

1 hour ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

1 hour ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

2 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago