Andolana originals

ಓದುಗರ ಪತ್ರ: ಪೈಶಾಚಿಕ ಕೃತ್ಯಗಳಿಗೆ ಕೊನೆ ಎಂದು?

ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಶಾಲೆಯ ಮುಖ್ಯಸ್ಥ ಹಾಗೂ ಶಿಕ್ಷಕರು ಸೇರಿ ನರಬಲಿ ನೀಡಿರುವ ಪೈಶಾಚಿಕ ಕೃತ್ಯವೊಂದು ಉತ್ತರ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕರೇ ವಾಮಾಚಾರದಂತಹ ಪೈಕಾಚಿಕ ಕೃತ್ಯವನ್ನು ನಂಬಿ ಮಗುವನ್ನು ನರಬಲಿ ನೀಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ.

ಇಲ್ಲಿಯವರೆಗೂ ಮಕ್ಕಳ ಮೇಲೆ ಶಿಕ್ಷಕರು ದೌರ್ಜನ್ಯವೆಸಗಿರುವ ಸುದ್ದಿಗಳನ್ನು ಕೇಳಿ ಆತಂಕವಾಗುತ್ತಿತ್ತು. ಆದರೆ ಈಗ ಮಕ್ಕಳನ್ನು ನರಬಲಿ ಕೊಡುವ ಮಟ್ಟಿಗೆ ಸಮಾಜದಲ್ಲಿ ಕ್ರೂರ ಮನಸ್ಥಿತಿ ನೆಲೆಯೂರಿದೆ ಎಂದರೆ ಗಂಭೀರವಾಗಿ ಆಲೋಚಿಸಬೇಕಿದೆ. ಹಾಗೆಯೇ ಮತ್ತೊಂದೆಡೆ ಶಾಲೆಗೆ ಬ್ಯಾಗ್ ತಂದಿಲ್ಲವೆಂದು ವಿದ್ಯಾರ್ಥಿಯೊಬ್ಬನ ಬಟ್ಟೆ ಕಳಚಿ ವಿದ್ಯುತ್ ಶಾಕ್ ನೀಡಿದ ಘಟನೆಯೂ ವರದಿಯಾಗಿದೆ. ಇಂತಹ ಘಟನೆಗಳನ್ನು ನೋಡುತ್ತಿದ್ದರೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕ ಪಡುವಂತಾಗಿದೆ. ಆದ್ದರಿಂದ ಅಲ್ಲಿನ ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

 

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago