ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಶಾಲೆಯ ಮುಖ್ಯಸ್ಥ ಹಾಗೂ ಶಿಕ್ಷಕರು ಸೇರಿ ನರಬಲಿ ನೀಡಿರುವ ಪೈಶಾಚಿಕ ಕೃತ್ಯವೊಂದು ಉತ್ತರ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕರೇ ವಾಮಾಚಾರದಂತಹ ಪೈಕಾಚಿಕ ಕೃತ್ಯವನ್ನು ನಂಬಿ ಮಗುವನ್ನು ನರಬಲಿ ನೀಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ.
ಇಲ್ಲಿಯವರೆಗೂ ಮಕ್ಕಳ ಮೇಲೆ ಶಿಕ್ಷಕರು ದೌರ್ಜನ್ಯವೆಸಗಿರುವ ಸುದ್ದಿಗಳನ್ನು ಕೇಳಿ ಆತಂಕವಾಗುತ್ತಿತ್ತು. ಆದರೆ ಈಗ ಮಕ್ಕಳನ್ನು ನರಬಲಿ ಕೊಡುವ ಮಟ್ಟಿಗೆ ಸಮಾಜದಲ್ಲಿ ಕ್ರೂರ ಮನಸ್ಥಿತಿ ನೆಲೆಯೂರಿದೆ ಎಂದರೆ ಗಂಭೀರವಾಗಿ ಆಲೋಚಿಸಬೇಕಿದೆ. ಹಾಗೆಯೇ ಮತ್ತೊಂದೆಡೆ ಶಾಲೆಗೆ ಬ್ಯಾಗ್ ತಂದಿಲ್ಲವೆಂದು ವಿದ್ಯಾರ್ಥಿಯೊಬ್ಬನ ಬಟ್ಟೆ ಕಳಚಿ ವಿದ್ಯುತ್ ಶಾಕ್ ನೀಡಿದ ಘಟನೆಯೂ ವರದಿಯಾಗಿದೆ. ಇಂತಹ ಘಟನೆಗಳನ್ನು ನೋಡುತ್ತಿದ್ದರೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕ ಪಡುವಂತಾಗಿದೆ. ಆದ್ದರಿಂದ ಅಲ್ಲಿನ ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…