Andolana originals

ಲೋಕಾರ್ಪಣೆಗೆ ಸಿದ್ಧವಾದ ಮೈಮುಲ್ ಉಪ ಕಚೇರಿ

ಕೆ.ಆರ್.ನಗರ: 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಹಾಲು ಉತ್ಪಾದಕರಿಗೆ, ಸಿಇಒಗಳಿಗೆ ಅನುಕೂಲ

ಭೇರ್ಯ ಮಹೇಶ್

ಕೆ.ಆರ್.ನಗರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಉಪ ಕಚೇರಿ ಲೋಕಾರ್ಪಣೆಗೆ ಸಿದ್ಧವಾಗಿದೆ.

ತಾಲ್ಲೂಕಿನ ಹಾಲು ಉತ್ಪಾದಕರಿಗೆ ಹಾಗೂ ಸಿಇಒಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಒಕ್ಕೂಟದ ಒಂದು ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ.

ನೂತನವಾಗಿ ನಿರ್ಮಾಣ ಮಾಡಿರುವ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಕಟ್ಟಡಕ್ಕೆ ಕ್ಷೀರ ಕ್ರಾಂತಿಯ ಪಿತಾಮಹ ಡಾ.ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಶೃಂಗಾರ ಗೊಂಡ ಈ ಕಟ್ಟಡದಲ್ಲಿ ಉಪ ವ್ಯವಸ್ಥಾಪಕರ ಕಚೇರಿ ಒಳಗೊಂಡಂತೆ 6 ವಿಸ್ತರಣಾಧಿಕಾರಿಗಳ ಕಚೇರಿ, ಸಭಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಹಾಲು ಉತ್ಪಾದಕರ ರಾಸುಗಳಿಗೆ ಬೇಕಾಗುವ ಔಷಧಗಳು, ಪಶು ಆಹಾರ ಸಾಮಗ್ರಿಗಳು ಸೇರಿದಂತೆ ಇನ್ನಷ್ಟು ಸರಕು ಸಂಗ್ರಹ ಮಾಡಲು ಸ್ಥಳಾವಕಾಶವಿರುವ ಈ ಕಟ್ಟಡವು ಹಾಲು ಒಕ್ಕೂಟದ ಬಹುದಿನಗಳ ಕನಸಾಗಿತ್ತು.

ಹಾಲು ಉತ್ಪಾದಕರ ಉಪ ಕಚೇರಿಯು ಕಳೆದ ಹಲವು ವರ್ಷಗಳಿಂದ ಪಟ್ಟಣದ ಹುಣಸೂರು ರಸ್ತೆಯಲ್ಲಿ ನಂತರ ಎಪಿಎಂಸಿ ಕಚೇರಿಯ ಒಂದು ಬಾಡಿಗೆ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದುದನ್ನು ಮನಗಂಡ ಒಕ್ಕೂಟದ ನಿರ್ದೇಶಕರು ಹಾಗೂ ಅಧಿಕಾರಿ ವರ್ಗದವರು ಕಚೇರಿಗೆ ಸ್ವಂತ ಕಟ್ಟಡ ಹೊಂದಲು ಬಯಸಿದ್ದರು.

ಎಲ್ಲರ ಸಹಕಾರದಿಂದ ಉಪಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದು, ಲೋಕಾರ್ಪಣೆ ಹಂತಕ್ಕೆ ಬಂದಿದೆ. ಶೀಘ್ರದಲ್ಲಿ ಉದ್ಘಾಟಿಸಲಾಗುವುದು ಎಂದು ಈ ಭಾಗದ ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಎ.ಟಿ.ಸೋಮಶೇಖರ್ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಈಗಾಗಲೇ ಕಟ್ಟಡ ಉದ್ಘಾಟನೆಗೆ ಸಿದ್ದವಾಗಿದ್ದು, ಕಟ್ಟಡದಲ್ಲಿ ಸಾಂಕೇತಿಕವಾಗಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲಿ ಉದ್ಘಾಟನೆಗೆ ಕ್ರಮ ವಹಿಸಲಾಗುವುದು.

-ಡಾ.ಪ್ರವೀಣ್‌ ಪತ್ತಾರ್, ಉಪ ವ್ಯವಸ್ಥಾಪಕರು, ಮೈಮುಲ್ ಉಪ ಕಚೇರಿ, ಕೆ.ಆರ್.ನಗರ.

ತಾಲ್ಲೂಕಿನ ಹಾಲು ಉತ್ಪಾದಕರ ಹಾಗೂ ಡೇರಿ ಕಾರ್ಯದರ್ಶಿ ಗಳ(ಸಿಇಒ) ಹಿತದೃಷ್ಟಿಯಿಂದ ಉಪ ಕಚೇರಿಗೆ ಒಂದು ಸ್ವಂತ ಕಟ್ಟಡ ನಿರ್ಮಾಣ ಆಗಬೇಕೆಂಬುದು ಎಲ್ಲರ ಒತ್ತಾಸೆಯಾಗಿತ್ತು. ಅಂತೆಯೇ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡಕ್ಕೆ ಕ್ಷೀರ ಕ್ರಾಂತಿ ಮಾಡಿದ ಕ್ಷೀರ ಪಿತಾಮಹ ಡಾ. ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಸುಸಜ್ಜಿತ ಉಪ ಕಚೇರಿಯನ್ನು ಶಾಸಕರು ನಿಗದಿಪಡಿಸಿದ ದಿನದಂದು

ಉದ್ಘಾಟನೆ ಮಾಡಲಾಗುವುದು.

-ಎ.ಟಿ.ಸೋಮಶೇಖರ್, ಮೈಸೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ.

 

 

 

 

ಆಂದೋಲನ ಡೆಸ್ಕ್

Recent Posts

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

3 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

28 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

55 mins ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

3 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

4 hours ago