Andolana originals

ಲೋಕಾರ್ಪಣೆಗೆ ಸಿದ್ಧವಾದ ಮೈಮುಲ್ ಉಪ ಕಚೇರಿ

ಕೆ.ಆರ್.ನಗರ: 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಹಾಲು ಉತ್ಪಾದಕರಿಗೆ, ಸಿಇಒಗಳಿಗೆ ಅನುಕೂಲ

ಭೇರ್ಯ ಮಹೇಶ್

ಕೆ.ಆರ್.ನಗರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಉಪ ಕಚೇರಿ ಲೋಕಾರ್ಪಣೆಗೆ ಸಿದ್ಧವಾಗಿದೆ.

ತಾಲ್ಲೂಕಿನ ಹಾಲು ಉತ್ಪಾದಕರಿಗೆ ಹಾಗೂ ಸಿಇಒಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಒಕ್ಕೂಟದ ಒಂದು ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ.

ನೂತನವಾಗಿ ನಿರ್ಮಾಣ ಮಾಡಿರುವ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಕಟ್ಟಡಕ್ಕೆ ಕ್ಷೀರ ಕ್ರಾಂತಿಯ ಪಿತಾಮಹ ಡಾ.ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಶೃಂಗಾರ ಗೊಂಡ ಈ ಕಟ್ಟಡದಲ್ಲಿ ಉಪ ವ್ಯವಸ್ಥಾಪಕರ ಕಚೇರಿ ಒಳಗೊಂಡಂತೆ 6 ವಿಸ್ತರಣಾಧಿಕಾರಿಗಳ ಕಚೇರಿ, ಸಭಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಹಾಲು ಉತ್ಪಾದಕರ ರಾಸುಗಳಿಗೆ ಬೇಕಾಗುವ ಔಷಧಗಳು, ಪಶು ಆಹಾರ ಸಾಮಗ್ರಿಗಳು ಸೇರಿದಂತೆ ಇನ್ನಷ್ಟು ಸರಕು ಸಂಗ್ರಹ ಮಾಡಲು ಸ್ಥಳಾವಕಾಶವಿರುವ ಈ ಕಟ್ಟಡವು ಹಾಲು ಒಕ್ಕೂಟದ ಬಹುದಿನಗಳ ಕನಸಾಗಿತ್ತು.

ಹಾಲು ಉತ್ಪಾದಕರ ಉಪ ಕಚೇರಿಯು ಕಳೆದ ಹಲವು ವರ್ಷಗಳಿಂದ ಪಟ್ಟಣದ ಹುಣಸೂರು ರಸ್ತೆಯಲ್ಲಿ ನಂತರ ಎಪಿಎಂಸಿ ಕಚೇರಿಯ ಒಂದು ಬಾಡಿಗೆ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದುದನ್ನು ಮನಗಂಡ ಒಕ್ಕೂಟದ ನಿರ್ದೇಶಕರು ಹಾಗೂ ಅಧಿಕಾರಿ ವರ್ಗದವರು ಕಚೇರಿಗೆ ಸ್ವಂತ ಕಟ್ಟಡ ಹೊಂದಲು ಬಯಸಿದ್ದರು.

ಎಲ್ಲರ ಸಹಕಾರದಿಂದ ಉಪಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದು, ಲೋಕಾರ್ಪಣೆ ಹಂತಕ್ಕೆ ಬಂದಿದೆ. ಶೀಘ್ರದಲ್ಲಿ ಉದ್ಘಾಟಿಸಲಾಗುವುದು ಎಂದು ಈ ಭಾಗದ ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಎ.ಟಿ.ಸೋಮಶೇಖರ್ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಈಗಾಗಲೇ ಕಟ್ಟಡ ಉದ್ಘಾಟನೆಗೆ ಸಿದ್ದವಾಗಿದ್ದು, ಕಟ್ಟಡದಲ್ಲಿ ಸಾಂಕೇತಿಕವಾಗಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲಿ ಉದ್ಘಾಟನೆಗೆ ಕ್ರಮ ವಹಿಸಲಾಗುವುದು.

-ಡಾ.ಪ್ರವೀಣ್‌ ಪತ್ತಾರ್, ಉಪ ವ್ಯವಸ್ಥಾಪಕರು, ಮೈಮುಲ್ ಉಪ ಕಚೇರಿ, ಕೆ.ಆರ್.ನಗರ.

ತಾಲ್ಲೂಕಿನ ಹಾಲು ಉತ್ಪಾದಕರ ಹಾಗೂ ಡೇರಿ ಕಾರ್ಯದರ್ಶಿ ಗಳ(ಸಿಇಒ) ಹಿತದೃಷ್ಟಿಯಿಂದ ಉಪ ಕಚೇರಿಗೆ ಒಂದು ಸ್ವಂತ ಕಟ್ಟಡ ನಿರ್ಮಾಣ ಆಗಬೇಕೆಂಬುದು ಎಲ್ಲರ ಒತ್ತಾಸೆಯಾಗಿತ್ತು. ಅಂತೆಯೇ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡಕ್ಕೆ ಕ್ಷೀರ ಕ್ರಾಂತಿ ಮಾಡಿದ ಕ್ಷೀರ ಪಿತಾಮಹ ಡಾ. ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಸುಸಜ್ಜಿತ ಉಪ ಕಚೇರಿಯನ್ನು ಶಾಸಕರು ನಿಗದಿಪಡಿಸಿದ ದಿನದಂದು

ಉದ್ಘಾಟನೆ ಮಾಡಲಾಗುವುದು.

-ಎ.ಟಿ.ಸೋಮಶೇಖರ್, ಮೈಸೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ.

 

 

 

 

ಆಂದೋಲನ ಡೆಸ್ಕ್

Recent Posts

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 mins ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

5 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

5 hours ago