Andolana originals

ಲೋಕಾರ್ಪಣೆಗೆ ಸಿದ್ಧವಾದ ಮೈಮುಲ್ ಉಪ ಕಚೇರಿ

ಕೆ.ಆರ್.ನಗರ: 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಹಾಲು ಉತ್ಪಾದಕರಿಗೆ, ಸಿಇಒಗಳಿಗೆ ಅನುಕೂಲ

ಭೇರ್ಯ ಮಹೇಶ್

ಕೆ.ಆರ್.ನಗರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಉಪ ಕಚೇರಿ ಲೋಕಾರ್ಪಣೆಗೆ ಸಿದ್ಧವಾಗಿದೆ.

ತಾಲ್ಲೂಕಿನ ಹಾಲು ಉತ್ಪಾದಕರಿಗೆ ಹಾಗೂ ಸಿಇಒಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಒಕ್ಕೂಟದ ಒಂದು ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ.

ನೂತನವಾಗಿ ನಿರ್ಮಾಣ ಮಾಡಿರುವ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಕಟ್ಟಡಕ್ಕೆ ಕ್ಷೀರ ಕ್ರಾಂತಿಯ ಪಿತಾಮಹ ಡಾ.ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಶೃಂಗಾರ ಗೊಂಡ ಈ ಕಟ್ಟಡದಲ್ಲಿ ಉಪ ವ್ಯವಸ್ಥಾಪಕರ ಕಚೇರಿ ಒಳಗೊಂಡಂತೆ 6 ವಿಸ್ತರಣಾಧಿಕಾರಿಗಳ ಕಚೇರಿ, ಸಭಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಹಾಲು ಉತ್ಪಾದಕರ ರಾಸುಗಳಿಗೆ ಬೇಕಾಗುವ ಔಷಧಗಳು, ಪಶು ಆಹಾರ ಸಾಮಗ್ರಿಗಳು ಸೇರಿದಂತೆ ಇನ್ನಷ್ಟು ಸರಕು ಸಂಗ್ರಹ ಮಾಡಲು ಸ್ಥಳಾವಕಾಶವಿರುವ ಈ ಕಟ್ಟಡವು ಹಾಲು ಒಕ್ಕೂಟದ ಬಹುದಿನಗಳ ಕನಸಾಗಿತ್ತು.

ಹಾಲು ಉತ್ಪಾದಕರ ಉಪ ಕಚೇರಿಯು ಕಳೆದ ಹಲವು ವರ್ಷಗಳಿಂದ ಪಟ್ಟಣದ ಹುಣಸೂರು ರಸ್ತೆಯಲ್ಲಿ ನಂತರ ಎಪಿಎಂಸಿ ಕಚೇರಿಯ ಒಂದು ಬಾಡಿಗೆ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದುದನ್ನು ಮನಗಂಡ ಒಕ್ಕೂಟದ ನಿರ್ದೇಶಕರು ಹಾಗೂ ಅಧಿಕಾರಿ ವರ್ಗದವರು ಕಚೇರಿಗೆ ಸ್ವಂತ ಕಟ್ಟಡ ಹೊಂದಲು ಬಯಸಿದ್ದರು.

ಎಲ್ಲರ ಸಹಕಾರದಿಂದ ಉಪಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದು, ಲೋಕಾರ್ಪಣೆ ಹಂತಕ್ಕೆ ಬಂದಿದೆ. ಶೀಘ್ರದಲ್ಲಿ ಉದ್ಘಾಟಿಸಲಾಗುವುದು ಎಂದು ಈ ಭಾಗದ ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಎ.ಟಿ.ಸೋಮಶೇಖರ್ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಈಗಾಗಲೇ ಕಟ್ಟಡ ಉದ್ಘಾಟನೆಗೆ ಸಿದ್ದವಾಗಿದ್ದು, ಕಟ್ಟಡದಲ್ಲಿ ಸಾಂಕೇತಿಕವಾಗಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲಿ ಉದ್ಘಾಟನೆಗೆ ಕ್ರಮ ವಹಿಸಲಾಗುವುದು.

-ಡಾ.ಪ್ರವೀಣ್‌ ಪತ್ತಾರ್, ಉಪ ವ್ಯವಸ್ಥಾಪಕರು, ಮೈಮುಲ್ ಉಪ ಕಚೇರಿ, ಕೆ.ಆರ್.ನಗರ.

ತಾಲ್ಲೂಕಿನ ಹಾಲು ಉತ್ಪಾದಕರ ಹಾಗೂ ಡೇರಿ ಕಾರ್ಯದರ್ಶಿ ಗಳ(ಸಿಇಒ) ಹಿತದೃಷ್ಟಿಯಿಂದ ಉಪ ಕಚೇರಿಗೆ ಒಂದು ಸ್ವಂತ ಕಟ್ಟಡ ನಿರ್ಮಾಣ ಆಗಬೇಕೆಂಬುದು ಎಲ್ಲರ ಒತ್ತಾಸೆಯಾಗಿತ್ತು. ಅಂತೆಯೇ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡಕ್ಕೆ ಕ್ಷೀರ ಕ್ರಾಂತಿ ಮಾಡಿದ ಕ್ಷೀರ ಪಿತಾಮಹ ಡಾ. ವರ್ಗೀಸ್ ಕುರಿಯನ್ ಭವನ ಎಂದು ನಾಮಕರಣ ಮಾಡಲಾಗಿದೆ. ಸುಸಜ್ಜಿತ ಉಪ ಕಚೇರಿಯನ್ನು ಶಾಸಕರು ನಿಗದಿಪಡಿಸಿದ ದಿನದಂದು

ಉದ್ಘಾಟನೆ ಮಾಡಲಾಗುವುದು.

-ಎ.ಟಿ.ಸೋಮಶೇಖರ್, ಮೈಸೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ.

 

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago