Andolana originals

ದಾಖಲೆ ಬರೆದ ದಸರಾ ವೆಬ್‌ಸೈಟ್‌

೨೧ ದಿನಗಳಲ್ಲಿ ೩೦ ಲಕ್ಷಕ್ಕೂ ಮೀರಿ ವೆಬ್‌ಸೈಟ್ ವೀಕ್ಷಣೆ 

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ೧೫ ಲಕ್ಷ ಹೆಚ್ಚು

ಜಂಬೂಸವಾರಿ ಮುಗಿಯುವ ಹೊತ್ತಿಗೆ

ಅರ್ಧಕೋಟಿ ದಾಟುವ ನಿರೀಕ್ಷೆ

ದಸರಾ ವೆಬ್‌ಸೈಟ್ https://mysoredasara.gov.in

ಮೈಸೂರು: ದಸರಾ ಮಹೋತ್ಸವ ಸಂಬಂಧವಾಗಿ ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರು ತಾವು ಕುಳಿತಲ್ಲೇ ಬೇಕಾದ ಮಾಹಿತಿಯನ್ನು ಪಡೆಯಲು ಜಿಲ್ಲಾಡಳಿತ ತೆರೆದಿರುವ ೨೦೨೫ರ ದಸರಾ ವೆಬ್‌ಸೈಟ್ ಮೊಟ್ಟ ಮೊದಲಿಗೆ ಅಭೂತಪೂರ್ವ ದಾಖಲೆ ಬರೆದಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹತ್ತು ಲಕ್ಷ ವೀಕ್ಷಕರ ಸಂಖ್ಯೆ ಹೆಚ್ಚಳವಾಗುವ ಜತೆಗೆ ಜಂಬೂಸವಾರಿ ಮೆರವಣಿಗೆ ಹೊತ್ತಿಗೆ ಅರ್ಧಕೋಟಿ ದಾಟುವ ಸಾಧ್ಯತೆ ಇದೆ. ವಿಶೇಷವಾಗಿ ಈ ಬಾರಿಯ ದಸರಾ ವೆಬ್‌ಸೈಟ್‌ನಲ್ಲಿ ಜಿಲ್ಲಾಡಳಿತ ಸಾಕಷ್ಟು ಸುಧಾರಣೆ ತರುವ ಜತೆಗೆ ಟೀಕೆಗಳಿಗೆ ಆಸ್ಪದ ಕೊಡದಂತೆ ತಪ್ಪು ವ್ಯಾಕರಣ ದೋಷಗಳನ್ನು ಸರಿಪಡಿಸಿ ನಿತ್ಯವೂ ಅಪ್ಡೇಟ್ ಮಾಡುತ್ತಿರುವುದರಿಂದ ಈ ಪ್ರಮಾಣದಲ್ಲಿ ವೀಕ್ಷಕರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶಂಸೆಗೂ ಪಾತ್ರವಾಗಿದೆ.

ದಾಖಲೆ ಬರೆದ ವೀಕ್ಷಕರ ಸಂಖ್ಯೆ: ಕಳೆದ ಎರಡು ದಶಕಗಳಿಂದ ಪ್ರತಿವರ್ಷ ದಸರಾ ವೆಬ್‌ಸೈಟ್ ತೆರೆದರೂ ತೆರೆಮರೆಯಲ್ಲಿತ್ತು. ಕೆಲವೇ ವರ್ಗದ ಜನರು ಮಾತ್ರ ಬಳಸುತ್ತಿದ್ದರು. ಕೊರೊನಾ ಸಮಯದಲ್ಲಿ ಸರಳ ದಸರಾ ಆಚರಣೆ ಮಾಡಿದ್ದರಿಂದಾಗಿ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಕಳೆದ ವರ್ಷ ವೆಬ್‌ಸೈಟ್ ತೆರೆದರೂ ೩೭ ದಿನಗಳಲ್ಲಿ ೧೫ ಲಕ್ಷ ಜನರು ವೀಕ್ಷಣೆ ಮಾಡಿದ್ದರು. ಆದರೆ, ಈ ಬಾರಿ ೨೦೨೫ರ ವೆಬ್ ಸೈಟ್ ಅನ್ನು ಸೆ.೪ರಂದು ಅಧಿಕೃತವಾಗಿ ಚಾಲನೆ ನೀಡಿದ ಮೇಲೆ ಸೆ.೨೫ ರವರೆಗೆ ಅಂದರೆ ೨೧ ದಿನಗಳಿಗೆ ೩೦ ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ೨೦೨೨ರಲ್ಲಿ ೧೧ಲಕ್ಷ, ೨೦೨೩ರಲ್ಲಿ ೧೩ ಲಕ್ಷ ವೀಕ್ಷಿಸಿದ್ದರೆ, ೨೦೨೪ರಲ್ಲಿ ೧೫ ಲಕ್ಷ ಭೇಟಿ ನೀಡಿದ್ದಾರೆ.

ಈ ವರ್ಷ ೩೦ ಲಕ್ಷ ಜನರಿಗೂ ಮೀರಿ ವೀಕ್ಷಣೆ ಮಾಡುವ ಮೂಲಕ ಮೊದಲ ಬಾರಿಗೆ ದಾಖಲೆ ಬರೆದಿದೆ. ಪ್ರತಿದಿನ ಅಂದಾಜು ೧ರಿಂದ ೧.೨೫ ಲಕ್ಷ ವೀಕ್ಷಣೆ ಮಾಡುತ್ತಿದ್ದು, ಜಂಬೂಸವಾರಿ ಹೊತ್ತಿಗೆ ಅರ್ಧ ಕೋಟಿ ದಾಟಬಹುದು ಎಂದು ಜಿಲ್ಲಾಡಳಿತ ನಿರೀಕ್ಷೆ ಇಟ್ಟುಕೊಂಡಿದೆ.

” ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ತೆರೆದಿರುವ ವೆಬ್‌ಸೈಟ್ ವರ್ಣರಂಜಿತ ಹಾಗೂ ಆಕರ್ಷಣೀಯವಾಗಿದೆ. ಈ ಬಾರಿ ತಪ್ಪು, ವ್ಯಾಕರಣ ದೋಷಕ್ಕೆ ಅವಕಾಶ ಇಲ್ಲದಂತೆ ಮಾಡಲಾಗಿದೆ. ವೀಕ್ಷಕರಿಗೆ ಕುಳಿತಲ್ಲೇ ದಸರೆಗೆ ಸಂಬಂಽಸಿದ ಎಲ್ಲಾ ಮಾಹಿತಿ ದೊರೆಯುವಂತೆ ಮಾಡಿರುವುದರಿಂದ ೩೦ ಲಕ್ಷ ಜನರು ವೀಕ್ಷಣೆ ಮಾಡಿರುವುದು ದಾಖಲೆ. ಜಂಬೂಸವಾರಿ ಹೊತ್ತಿಗೆ ವೀಕ್ಷಕರ ಸಂಖ್ಯೆದುಪ್ಪಟ್ಟಾಗುವ ಸಾಧ್ಯತೆ ಇದೆ.”

-ಡಾ.ಪಿ.ಶಿವರಾಜು, ಅಪರ ಜಿಲ್ಲಾಧಿಕಾರಿ

ಆಂದೋಲನ ಡೆಸ್ಕ್

Recent Posts

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…

7 mins ago

ತಮಿಳುನಾಡು ವಿಧಾನಸಭಾ ಚುನಾವಣೆ: ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿವೈಎಸ್ಪಿ ಭೇಟಿ, ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,…

15 mins ago

ಗಲ್ಲಾಪೆಟ್ಟಿಗೆಯಲ್ಲಿ ಧುರಂಧರ್-‌2 ಅಬ್ಬರ: 800 ಕೋಟಿ ಕ್ಲಬ್‌ ಸೇರುವತ್ತ ಓಟ

ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್-‌2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ…

38 mins ago

ಅಮೇರಿಕಾದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ?

ವಾಷಿಂಗ್ಟನ್:‌ ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

1 hour ago

ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಸಚಿವ ಈಶ್ವರ್‌ ಖಂಡ್ರೆ ಭರವಸೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…

1 hour ago

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…

2 hours ago