Andolana originals

ಓದುಗರ ಪತ್ರ: ಚುನಾವಣೆಯ ಕೊನೆಯ ಘಟ್ಟದಲ್ಲಿ ಈ ಆದೇಶ ಏಕೆ?

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ
ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಈಗ ಅಂತಿಮ ಘಟ್ಟದಲ್ಲಿದೆ. ಈಗಾಗಲೇ ಶೇ.90ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆಗೆಲ್ಲ ಸುಮ್ಮನ್ನಿದ್ದ ಚುನಾವಣಾ ಆಯೋಗ ಚುನಾವಣೆಯ ಕೊನೆಯ ಹಂತದಲ್ಲಿ ಎಚ್ಚರಿಕೆ ನೀಡಿದರೆ ಇದರಿಂದಾಗುವ ಉಪಯೋಗವಾದರೂ ಏನು? ಇಷ್ಟು ದಿನಗಳ ಕಾಲ ದೇಶದಲ್ಲಿ ರಾಜಕೀಯ ಮುಖಂಡರು ಕೋಮು ಪ್ರಚೋಧಿತ ಭಾಷಣಗಳನ್ನು, ದೇಶ ವಿಭಜಿಸುವ, ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಮಾತುಗಳನ್ನಾಡಿದ್ದಾರೆ. ಇದನ್ನೆಲ್ಲ ಕೇಳಿಯೂ ಸುಮ್ಮನ್ನಿದ್ದ ಚುನಾವಣಾ ಆಯೋಗ ಈಗ ರಾಜಕೀಯ ಪಕ್ಷಗಳಿಗೆ ಉಪದೇಶ ಮಾಡುವುದರಲ್ಲಿ ಅರ್ಥವಿಲ್ಲ. ಚುನಾವಣೆಗೂ ಮುನ್ನವೇ ಈ ರೀತಿಯ ಎಚ್ಚರಿಕೆಯನ್ನು ನೀಡಿ, ನಿಯಮಬಾಹಿರವಾಗಿ ಚುನಾವಣಾ ಪ್ರಚಾರ ಮಾಡುವವರ ಹಾಗೂ ಪ್ರಚೋಧಿತ ಭಾಷಣಗಳನ್ನು ಮಾಡುವವರ ವಿರುದ್ಧ ಕ್ರಮತೆಗೆದುಕೊಂಡಿದ್ದರೆ ಚುನಾವಣಾ ಆಯೋಗದ ಕ್ರಮವನ್ನು ಸಾರ್ವಜನಿಕರು ಸ್ವಾಗತಿಸುತ್ತಿದ್ದರು. ಆದರೆ ಚುನಾವಣೆಯ ಕೊನೆಯ ಘಟ್ಟದಲ್ಲಿ ನೆಪ ಮಾತ್ರಕ್ಕೆ ಆದೇಶಿಸಿದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

andolana

Recent Posts

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

28 mins ago

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

2 hours ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

2 hours ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

2 hours ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

5 hours ago