Andolana originals

ಓದುಗರ ಪತ್ರ: ಚುನಾವಣೆಯ ಕೊನೆಯ ಘಟ್ಟದಲ್ಲಿ ಈ ಆದೇಶ ಏಕೆ?

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ
ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಈಗ ಅಂತಿಮ ಘಟ್ಟದಲ್ಲಿದೆ. ಈಗಾಗಲೇ ಶೇ.90ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆಗೆಲ್ಲ ಸುಮ್ಮನ್ನಿದ್ದ ಚುನಾವಣಾ ಆಯೋಗ ಚುನಾವಣೆಯ ಕೊನೆಯ ಹಂತದಲ್ಲಿ ಎಚ್ಚರಿಕೆ ನೀಡಿದರೆ ಇದರಿಂದಾಗುವ ಉಪಯೋಗವಾದರೂ ಏನು? ಇಷ್ಟು ದಿನಗಳ ಕಾಲ ದೇಶದಲ್ಲಿ ರಾಜಕೀಯ ಮುಖಂಡರು ಕೋಮು ಪ್ರಚೋಧಿತ ಭಾಷಣಗಳನ್ನು, ದೇಶ ವಿಭಜಿಸುವ, ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಮಾತುಗಳನ್ನಾಡಿದ್ದಾರೆ. ಇದನ್ನೆಲ್ಲ ಕೇಳಿಯೂ ಸುಮ್ಮನ್ನಿದ್ದ ಚುನಾವಣಾ ಆಯೋಗ ಈಗ ರಾಜಕೀಯ ಪಕ್ಷಗಳಿಗೆ ಉಪದೇಶ ಮಾಡುವುದರಲ್ಲಿ ಅರ್ಥವಿಲ್ಲ. ಚುನಾವಣೆಗೂ ಮುನ್ನವೇ ಈ ರೀತಿಯ ಎಚ್ಚರಿಕೆಯನ್ನು ನೀಡಿ, ನಿಯಮಬಾಹಿರವಾಗಿ ಚುನಾವಣಾ ಪ್ರಚಾರ ಮಾಡುವವರ ಹಾಗೂ ಪ್ರಚೋಧಿತ ಭಾಷಣಗಳನ್ನು ಮಾಡುವವರ ವಿರುದ್ಧ ಕ್ರಮತೆಗೆದುಕೊಂಡಿದ್ದರೆ ಚುನಾವಣಾ ಆಯೋಗದ ಕ್ರಮವನ್ನು ಸಾರ್ವಜನಿಕರು ಸ್ವಾಗತಿಸುತ್ತಿದ್ದರು. ಆದರೆ ಚುನಾವಣೆಯ ಕೊನೆಯ ಘಟ್ಟದಲ್ಲಿ ನೆಪ ಮಾತ್ರಕ್ಕೆ ಆದೇಶಿಸಿದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

andolana

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

35 mins ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

45 mins ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

1 hour ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

2 hours ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

2 hours ago