Andolana originals

ಓದುಗರ ಪತ್ರ: ಚುನಾವಣೆಯ ಕೊನೆಯ ಘಟ್ಟದಲ್ಲಿ ಈ ಆದೇಶ ಏಕೆ?

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ
ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಈಗ ಅಂತಿಮ ಘಟ್ಟದಲ್ಲಿದೆ. ಈಗಾಗಲೇ ಶೇ.90ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆಗೆಲ್ಲ ಸುಮ್ಮನ್ನಿದ್ದ ಚುನಾವಣಾ ಆಯೋಗ ಚುನಾವಣೆಯ ಕೊನೆಯ ಹಂತದಲ್ಲಿ ಎಚ್ಚರಿಕೆ ನೀಡಿದರೆ ಇದರಿಂದಾಗುವ ಉಪಯೋಗವಾದರೂ ಏನು? ಇಷ್ಟು ದಿನಗಳ ಕಾಲ ದೇಶದಲ್ಲಿ ರಾಜಕೀಯ ಮುಖಂಡರು ಕೋಮು ಪ್ರಚೋಧಿತ ಭಾಷಣಗಳನ್ನು, ದೇಶ ವಿಭಜಿಸುವ, ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಮಾತುಗಳನ್ನಾಡಿದ್ದಾರೆ. ಇದನ್ನೆಲ್ಲ ಕೇಳಿಯೂ ಸುಮ್ಮನ್ನಿದ್ದ ಚುನಾವಣಾ ಆಯೋಗ ಈಗ ರಾಜಕೀಯ ಪಕ್ಷಗಳಿಗೆ ಉಪದೇಶ ಮಾಡುವುದರಲ್ಲಿ ಅರ್ಥವಿಲ್ಲ. ಚುನಾವಣೆಗೂ ಮುನ್ನವೇ ಈ ರೀತಿಯ ಎಚ್ಚರಿಕೆಯನ್ನು ನೀಡಿ, ನಿಯಮಬಾಹಿರವಾಗಿ ಚುನಾವಣಾ ಪ್ರಚಾರ ಮಾಡುವವರ ಹಾಗೂ ಪ್ರಚೋಧಿತ ಭಾಷಣಗಳನ್ನು ಮಾಡುವವರ ವಿರುದ್ಧ ಕ್ರಮತೆಗೆದುಕೊಂಡಿದ್ದರೆ ಚುನಾವಣಾ ಆಯೋಗದ ಕ್ರಮವನ್ನು ಸಾರ್ವಜನಿಕರು ಸ್ವಾಗತಿಸುತ್ತಿದ್ದರು. ಆದರೆ ಚುನಾವಣೆಯ ಕೊನೆಯ ಘಟ್ಟದಲ್ಲಿ ನೆಪ ಮಾತ್ರಕ್ಕೆ ಆದೇಶಿಸಿದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

andolana

Recent Posts

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

43 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

6 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

6 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

7 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

9 hours ago