Andolana originals

ಓದುಗರ ಪತ್ರ: ಚುನಾವಣೆಯ ಕೊನೆಯ ಘಟ್ಟದಲ್ಲಿ ಈ ಆದೇಶ ಏಕೆ?

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ
ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಈಗ ಅಂತಿಮ ಘಟ್ಟದಲ್ಲಿದೆ. ಈಗಾಗಲೇ ಶೇ.90ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆಗೆಲ್ಲ ಸುಮ್ಮನ್ನಿದ್ದ ಚುನಾವಣಾ ಆಯೋಗ ಚುನಾವಣೆಯ ಕೊನೆಯ ಹಂತದಲ್ಲಿ ಎಚ್ಚರಿಕೆ ನೀಡಿದರೆ ಇದರಿಂದಾಗುವ ಉಪಯೋಗವಾದರೂ ಏನು? ಇಷ್ಟು ದಿನಗಳ ಕಾಲ ದೇಶದಲ್ಲಿ ರಾಜಕೀಯ ಮುಖಂಡರು ಕೋಮು ಪ್ರಚೋಧಿತ ಭಾಷಣಗಳನ್ನು, ದೇಶ ವಿಭಜಿಸುವ, ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಮಾತುಗಳನ್ನಾಡಿದ್ದಾರೆ. ಇದನ್ನೆಲ್ಲ ಕೇಳಿಯೂ ಸುಮ್ಮನ್ನಿದ್ದ ಚುನಾವಣಾ ಆಯೋಗ ಈಗ ರಾಜಕೀಯ ಪಕ್ಷಗಳಿಗೆ ಉಪದೇಶ ಮಾಡುವುದರಲ್ಲಿ ಅರ್ಥವಿಲ್ಲ. ಚುನಾವಣೆಗೂ ಮುನ್ನವೇ ಈ ರೀತಿಯ ಎಚ್ಚರಿಕೆಯನ್ನು ನೀಡಿ, ನಿಯಮಬಾಹಿರವಾಗಿ ಚುನಾವಣಾ ಪ್ರಚಾರ ಮಾಡುವವರ ಹಾಗೂ ಪ್ರಚೋಧಿತ ಭಾಷಣಗಳನ್ನು ಮಾಡುವವರ ವಿರುದ್ಧ ಕ್ರಮತೆಗೆದುಕೊಂಡಿದ್ದರೆ ಚುನಾವಣಾ ಆಯೋಗದ ಕ್ರಮವನ್ನು ಸಾರ್ವಜನಿಕರು ಸ್ವಾಗತಿಸುತ್ತಿದ್ದರು. ಆದರೆ ಚುನಾವಣೆಯ ಕೊನೆಯ ಘಟ್ಟದಲ್ಲಿ ನೆಪ ಮಾತ್ರಕ್ಕೆ ಆದೇಶಿಸಿದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

23 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

25 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

27 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

29 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

33 mins ago