ಹೈನುಗಾರಿಕೆಯನ್ನು ಅವಲಂಬಿಸಿರುವ ರೈತ ಕುಟುಂಬಗಳಿಗೆ ಹೊಡೆತ
ಮಂಜು ಕೋಟೆ
ಎಚ್. ಡಿ. ಕೋಟೆ: ಮೈಮುಲ್ ಆಡಳಿತ ಮಂಡಳಿಯವರು ರೈತರಿಂದ ಖರೀದಿ ಮಾಡುವ ಹಾಲಿನ ದರವನ್ನು ಕಡಿಮೆ ಮಾಡಿರುವುದರಿಂದ ರೈತರಿಗೆ ಹೊಡೆತ ಬಿದ್ದಿದೆ.
ಜಿಲ್ಲೆಯಲ್ಲಿ ಹೈನುಗಾರಿಕೆ ಮುಖಾಂತರ ರೈತರು ಆರ್ಥಿಕ ಬೆಳವಣಿಗೆ ಕಾಣುತ್ತಿರುವ ಇಂತಹ ಸಂದರ್ಭದಲ್ಲಿ ಪ್ರತಿ ಲೀಟರ್ ಹಾಲಿಗೆ ೨ ರೂ. ಗಳನ್ನು ಕಡಿತಗೊಳಿಸಿರುವುದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಆಂಧ್ರಪ್ರದೇಶದ ತಿರುಪತಿಯ ಲಾಡು ಪ್ರಕರಣದಿಂದ ಕರ್ನಾಟಕದ ನಂದಿನಿ ಹಾಲು, ತುಪ್ಪ, ಬೆಣ್ಣೆ, ಮೊಸರು ಇನ್ನಿತರ ಪದಾರ್ಥಗಳಿಗೆ ಬೇಡಿಕೆ ಹೆಚ್ಚಾಗಿದೆ. ಇಂಥ ಸಂದರ್ಭದಲ್ಲಿ ರೈತರು ಡೇರಿಗಳಿಗೆ ನೀಡುವ ಹಾಲಿನ ದರ ಕಡಿತ ಮಾಡಿದ್ದು, ಪ್ರತಿಯೊಬ್ಬ ರೈತರಿಗೂ ಪ್ರತಿನಿತ್ಯ ೫೦ ರಿಂದ ೧೦೦ ರೂ. ವರೆಗೆ ಆದಾಯ ಕಡಿಮೆಯಾಗಿದೆ.
ಸರ್ಕಾರದಿಂದ ಪ್ರತಿ ಲೀಟರ್ಗೆ ನೀಡುತ್ತಿದ್ದ ಪ್ರೋತ್ಸಾಹ ಧನ ೫ ರೂ. ಗಳು ಕಳೆದ ೭ ತಿಂಗಳಿನಿಂದ ರೈತರಿಗೆ ಸೇರಿಲ್ಲ. ಈ ನಡುವೆ ಸಾವಿರಾರು ರೂ. ಖರ್ಚು ಮಾಡಿ, ಸಾಲ ಮಾಡಿ ಜಾನುವಾರುಗಳ ಸಾಕಣೆ ಮಾಡುತ್ತಾ ಹೈನುಗಾರಿಕೆ ನಡೆಸುತ್ತಿದ್ದಾರೆ. ಪ್ರತಿ ಲೀಟರ್ ಹಾಲನ್ನು ಹಸುವಿನಿಂದ ಪಡೆಯ ಬೇಕಾದರೆ ರೈತ ಕುಟುಂಬ ಬೆಳಿಗ್ಗೆಯಿಂದ ರಾತ್ರಿಯವರೆಗೆ ಕೆಲಸ ಮಾಡಬೇಕಾಗಿದೆ.
ಡೇರಿಗೆ ನೀಡುತ್ತಿದ್ದ ಪ್ರತಿ ಲೀಟರ್ ಹಾಲಿಗೆ ೩೩ ರೂ. ನಂತೆ ಮೈಮುಲ್ ೧೫ ದಿನಗಳಿಗೊಮ್ಮೆ ರೈತರ ಬ್ಯಾಂಕ್ ಖಾತೆಗೆ ಮೊತ್ತವನ್ನು ಜಮಾ ಮಾಡುತ್ತಿತ್ತು. ಈಗ ಪ್ರತಿ ಲೀಟರ್ ಹಾಲಿಗೆ ೨ ರೂ. ಕಡಿಮೆ ಮಾಡಿರುವುದರಿಂದ ಜಿಲ್ಲೆಯ ೯೬,೨೧೬ ರೈತರಿಗೆ ೯ ಲಕ್ಷ ಲೀಟರ್ ಹಾಲಿಗೆ ಬೆಲೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇಸಿಗೆ ಬರುವುದರಿಂದ ಹೈನುಗಾರಿಕೆಯನ್ನು ಉಳಿಸಿಕೊಂಡು ಹಾಲು ಉತ್ಪಾದನೆ ಮಾಡುವುದು ಸವಾಲಿನ ಕೆಲಸವಾಗಲಿದೆ. ಆದ್ದರಿಂದ ರೈತರಿಂದ ಖರೀದಿ ಮಾಡುವ ಹಾಲಿನ ದರವನ್ನು ಹೆಚ್ಚು ಮಾಡಿದರೆ ಮಾತ್ರ ಹೈನುಗಾರಿಕೆ ಉಳಿಯಲು ಸಾಧ್ಯವಾಗಲಿದೆ ಎನ್ನುತ್ತಾರೆ ಹಾಲು ಉತ್ಪಾದಕರು.
ಒಂದು ತಿಂಗಳಿನಿಂದ ರೈತರಿಗೆ ಹಾಲು ಸರಬರಾಜು ಮಾಡಿರುವ ಹಣವನ್ನು ನೀಡಿಲ್ಲ. ಇದನ್ನು ಸರಿದೂಗಿಸಲು ಪ್ರತಿ ಲೀಟರ್ಗೆ ೨ ರೂ. ಗಳನ್ನು ಕಡಿಮೆ ಮಾಡಲಾಗಿದೆ. ಇದು ತಾತ್ಕಾಲಿಕವಾಗಿದೆ. ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಾಲಿಗೆ ನೀಡುತ್ತಿರುವ ದರಕ್ಕಿಂತ ಅತಿ ಹೆಚ್ಚು ಬೆಲೆಯನ್ನು ನಾವು ನೀಡುತ್ತಿದ್ದೇವೆ. ಮೈಮುಲ್ ರೈತರ ಪರವಾಗಿ ಕೆಲಸ ಮಾಡುತ್ತಿದೆ. -ಚೆಲುವರಾಜು, ಮೈಮುಲ್ ಅಧ್ಯಕ್ಷರು
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…